ನೃತ್ಯೋತ್ಸವ ಕಾರ್ಯಕ್ರಮ ಸಮಾಜದಲ್ಲಿ ನಮ್ಮೆಲ್ಲರಿಗೆ ಪ್ರೇರಣೆಯಾಗಿದೆ.

ಶಹಾಪುರ ;

ನಮ್ಮ ಶಹಾಪುರ ತಾಲೂಕು ಜಿಲ್ಲೆಯ ಮಟ್ಟದಲ್ಲಿ ಹಾಗೂ ರಾಜ್ಯ ಮಟ್ಟದವರೆಗೂ ತೆಗೆದುಕೊಂಡು ಹೋಗಬೇಕೆನ್ನುವ ಆಸೆ ನಮ್ಮದು ಎಂದು ಸಂಸ್ಥೆಯ ಅಧ್ಯಕ್ಷ್ಯೇ ಸುರೇಖಾ ಕುಂಬಾರ ಅವರು ಅಭಿಪ್ರಾಯಪಟ್ಟರು.

ಯಾದಗಿರಿ ಜಿಲ್ಲಾಡಳಿತ, ಸಹಾಯಕ ನಿರ್ದೇಶಕರು , ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ, ಸಂಯುಕ್ತಾಶ್ರಯದಲ್ಲಿ ಕುಂಬಾರಗೆರಿ ಹಿರೇಮಠದಲ್ಲಿ ನಡೆದ ನೃತ್ಯೋತ್ಸವ ಕಾರ್ಯಕ್ರಮದ ಪ್ರಯುಕ್ತ ದೀಪ ಬೆಳಗಿಸಿ, ನಟರಾಜ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಅವರು ಮಾತನಾಡಿದರು.

ಪ್ರಾಸ್ತಾವಿಕ; ಶಿಕ್ಷಣಕ್ಕೆ ನೀಡುವ ಆದ್ಯತೆ ಸಾಂಸ್ಕೃತಿಕ ನೃತ್ಯ ಹಾಗೂ ಸಂಗೀತಕ್ಕೆ ಆದ್ಯತೆ ನೀಡಬೇಕು ಹಾಗೂ ಸಂಸ್ಥೆಯು ಸರಕಾರದ ಸೌಲಭ್ಯಗಳನ್ನು ಬಳಸಿಕೊಂಡು ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷ ಣಿಕವಾಗಿ ಬೆಳೆಯಬೇಕು ಎಂದು ಶರಣು ದೊರನಹಳ್ಳಿ ಅವರು ಅಭಿಪ್ರಾಯ ಪಟ್ಟರು.

ಇದೆ ಸಂದರ್ಭದಲ್ಲಿ ನಟರಾಜ ನೃತ್ಯ ಹಾಗೂ ಸಾಂಸ್ಕೃತಿಕ ಸಂಸ್ಥೆಯ ವಿದ್ಯಾರ್ಥಿಗಳು ನೃತ್ಯ ಪ್ರದರ್ಶಿಸಿದರು.

ಸಮಾಜದಲ್ಲಿ ಈ ಸಂಸ್ಥೆಯು ಬಹಳ ಪ್ರೇರಣೆಯಾಗಿದೆ ಹಾಗೂ ಇದೆ ರೀತಿಯ ಸಮಾಜಮುಖಿ ಕೆಲಸಗಳು,ನಮ್ಮ ಸಂಸ್ಕೃತಿಯನ್ನು ಉಳಿಸಿ ಬೆಳೆಸಿಕೊಂಡು ಹೋಗಬೇಕೆಂದು ಶಹಾಪುರಿನ ಯುವ ಉದ್ಯಮಿ ರಾಜು ಆನೆಗುಂದಿ ಅವರು ಮಾತನಾಡಿದರು,
ಗವಾಯಿಗಳದ ಬುದಯ್ಯ ಸ್ವಾಮಿ ಹಿರೇಮಠ ಮತ್ತು ತಬಲಾ ಸಾತಿ ಮಲ್ಲಿಕಾರ್ಜುನ ಇವರು ನೆರವೇರಿಸಿದರು. ಸುಗುರೇಶ ಕುಂಬಾರ ನಿರೂಪಿಸಿದರು ಶರಣು ಯಡ್ರಾಮಿ ಸ್ವಾಗತಿಸಿದರು ಸಂಗೀತಾ ಹೂಗಾರ ಇವರು ವಂದಿಸಿದರು
ಈ ಸಂದರ್ಭದಲ್ಲಿ
ಚಂದಪ್ಪ ವಡಿಗೆರಿ , ಉಮೇಶ ಗುಡಗುಂಟಿ, ಸಂಗಮೇಶ ಅನವಾರ, ರಾಜು ಆನೆಗುಂದಿ, ಸಂಸ್ಥೆಯ ಅಧ್ಯಕ್ಷರು ಹಾಗೂ ಕಾರ್ಯದರ್ಶಿ, ಪ್ರೇಕ್ಷಕರು, ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

You missed

*ಬಡ ಕಾರ್ಮಿಕ ಮಕ್ಕಳ ಹಿತಕ್ಕಾಗಿ ಉಚಿತ ವಿವಾಹ ನೋಂದಣಿ -ಮೌನೇಶ ಹಳಿಸಗರ* ಕಲ್ಯಾಣ ಕರ್ನಾಟಕ ಕಾರ್ಮಿಕ ಹಿತ ರಕ್ಷಣಾ ಸಂಘಟನೆಯಿಂದ ಕಲ್ಯಾಣ ಕರ್ನಾಟಕ ಭಾಗದಲ್ಲಿ ಸತತವಾಗಿ ಕಳೆದ 3 ವರ್ಷಗಳಿಂದ ಕಾರ್ಮಿಕರ ಹಿತಕ್ಕಾಗಿ ಕಾರ್ಮಿಕರ ಹೇಳ್ಗೆಗಾಗಿ ಮತ್ತು ನಾಡು ನುಡಿ ಜಲಕ್ಕಾಗಿ ಶ್ರಮಿಸುತ್ತಾ ಬಂದಿದೆ. ಈಗ ಮೂರನೇ ವರ್ಷ ಮುಕ್ತಾಯಗೊಂಡು 4ನೇ ವರ್ಷಕ್ಕೆ ಪಾದರ್ಪಣೆ ಯಾಗುತ್ತಿರುವ ಹಿನ್ನೆಲೆಯಲ್ಲಿ ಬರುವ ಫೆಬ್ರವರಿ 8ರಂದು ಶಹಾಪುರ ನಗರದ ಹಳಿಸಗರದಲ್ಲಿ ಉಚಿತ ಸಾಮೂಹಿಕ ವಿವಾಹ ಸಮಾರಂಭ ಹಮ್ಮಿಕೊಂಡಿದ್ದು ಈ ಕಾರ್ಯಕ್ರಮಕ್ಕೆ ನಾಡಿನ ಹರ,ಗುರು ಚರಮೂರ್ತಿಗಳು ಹಾಗೂ ರಾಜಕೀಯ ಗಣ್ಯರು, ವಿವಿಧ ಸಂಘಟನೆಯ ಮುಖಂಡರು ಭಾಗವಹಿಸಲಿದ್ದಾರೆ. ಪ್ರತಿ ವರ್ಷದಂತೆ ಈ ವರ್ಷವು ಶಹಾಪೂರ ನಗರ ಹಳಿಸಗರ ಗ್ರಾಮದಲ್ಲಿ ಕಲ್ಯಾಣ ಕರ್ನಾಟಕ ಕಾರ್ಮಿಕ ಹಿತ ರಕ್ಷಣಾ ಸಂಘವು ಬಡವರ ಮಕ್ಕಳ ಹಿತಕ್ಕಾಗಿ ಈ ಸಂಘಟನೆಯ ಉಚಿತ ವಿವಾಹ ಕಾರ್ಯಕ್ರಮ ಹಮ್ಮಿಕೊಂಡಿದೆ ಹಾಗಾಗಿ ಸಗರ ನಾಡಿನ ಜನತೆಯು ಈ ಕಾರ್ಯಕ್ರಮದಲ್ಲಿ ತಮ್ಮ ಮಕ್ಕಳಿಗೆ ಮದುವೆ ಮಾಡುಲು ಇಚ್ಚಿಸುವವರು ಸಂಘಟನೆಯ ಸಂಸ್ಥಾಪಕ ಅಧ್ಯಕ್ಷರಾದ ಮೌನೇಶ ಹಳಿಸಗರ ಅವರನ್ನು ಸಂಪರ್ಕಿಸಬಹುದಾಗಿದೆ ತಿಳಿಸಿದ್ದಾರೆ. ಮೌನೇಶ ಹಳಿಸಗರ ಸಂಪರ್ಕಿಸುವ ಕರೆ ಸಂಖ್ಯೆ. 9731520852 -9741142898 *

ಸುದ್ದಿ ಮತ್ತು ಜಾಹಿರಾತುಗಳಿಗಾಗಿ ಸಂಪರ್ಕಿಸಿ : +91 99809 19019
error: Content is protected !!