ಜಾಹೀರಾತು ಸಂಸ್ಥೆಗಳಿಗೆ ಎಚ್ಚರಿಕೆ ನೀಡಿದ ವಾರ್ತಾ ಇಲಾಖೆಯ ಆಯುಕ್ತ ಹೇಮಂತ್‌

*ಜಾಹೀರಾತು ಪ್ರಕಟಿಸಿದ 3 ತಿಂಗಳಲ್ಲಿ ಹಣ ಪಾವತಿಸದಿದ್ದರೆ ಕಮಿಷನ್ ರದ್ದು*

*ಬೆಂಗಳೂರು:* ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ಜಿಲ್ಲಾ ಮಟ್ಟದ ದಿನಪತ್ರಿಕೆಗಳು ಮತ್ತು ಪ್ರಾದೇಶಿಕ ಪತ್ರಿಕೆಗಳ ಸಮಸ್ಯೆಗಳ ಕುರಿತ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಿಗೆ ಗುರುವಾರ ದಿನಪತ್ರಿಕೆಗಳ ಸಂಪಾದಕರ ಸಂಘದಿಂದ ಮನವಿ ಸಲ್ಲಿಸಿತು. ಮನವಿ ಸ್ವೀಕರಿಸಿ ಮಾತನಾಡಿದ ವಾರ್ತಾ ಇಲಾಖೆಯ ಆಯುಕ್ತರಾದ ಹೇಮಂತ್ ಕುಮಾರ್ ನಿಂಬಾಳ್ಕರ್ ಅವರು, ಜಾಹೀರಾತು ಸಂಸ್ಥೆಗಳ ಮೂಲಕ ಬಿಡುಗಡೆ ಆಗುವ ವಾರ್ತಾ ಇಲಾಖೆಯ ಜಾಹೀರಾತುಗಳಿಗೆ, ಪತ್ರಿಕೆಯಲ್ಲಿ ಪ್ರಕಟಗೊಂಡ ದಿನಾಂಕದಿಂದ 3 ತಿಂಗಳದೊಳಗೆ ಹಣ ಪಾವತಿ ಮಾಡದಿದ್ದರೆ, ಅಂತಹ ಜಾಹೀರಾತು ಸಂಸ್ಥೆಗಳಿಗೆ ಕಮಿಷನ್ ರದ್ದುಗೊಳಿಸಲಾಗುವುದು ಎಂದು ಅವರು ತಿಳಿಸಿದರು.

ನಂತರ ಸಂಪಾದಕರ ಸಂಘದ ರಾಜ್ಯಾಧ್ಯಕ್ಷ ಎ.ಸಿ.ತಿಪ್ಪೇಸ್ವಾಮಿ ಅವರು ಮಾತನಾಡಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ಜಿಲ್ಲಾ ಮಟ್ಟದ ದಿನಪತ್ರಿಕೆಗಳು ಮತ್ತು ಪ್ರಾದೇಶಿಕ ಪತ್ರಿಕೆಗಳು ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿವೆ. ಪ್ರಜಾಪ್ರಭುತ್ವದ 4ನೇ ಅಂಗವೆಂದು ಹೇಳುವ ಪತ್ರಿಕಾ ರಂಗ ಇತ್ತೀಚಿನ ದಿನಗಳಲ್ಲಿ ಬಡವಾಗುತ್ತಿದೆ. ಪತ್ರಿಕೆಗಳ ಬೆಳವಣಿಗೆಗೆ ಸರ್ಕಾರ ಹತ್ತು ಹಲವಾರು ಯೋಜನೆಗಳನ್ನು ಅನುಷ್ಠಾನ ಮಾಡುತ್ತಿದ್ದರೂ ಸಹ ಅವುಗಳಿಂದ ಪತ್ರಿಕೆಗಳ ಬೆಳವಣಿಗೆ ಆಗುತ್ತಿಲ್ಲ ಎಂದರು.
ಆದ್ದರಿಂದ ಪತ್ರಿಕೆಗಳ ಏಳಿಗೆಗೆ ಸರ್ಕಾರದ ಸಹಾಯ ಮತ್ತು ಸಹಕಾರ ಅತ್ಯವಶ್ಯಕವಾಗಿದೆ, ಈ ನಿಟ್ಟಿನಲ್ಲಿ ಸಂಘದ ಪ್ರಮುಖ ಮತ್ತು ನೈಜ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯ ಮಾಡಲಾಯಿತು ಎಂದರು.

ಈ ಸಂದರ್ಭದಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ಚನ್ನಬಸವ ಬಾಗಲವಾಡ, ರಾಜ್ಯ ಖಜಾಂಚಿ ಖಾನ್ ಸಾಬ್ ಮೋಮಿನ್, ರಾಜ್ಯ ಉಪಾಧ್ಯಕ್ಷರುಗಳಾದ ಮಂಜುನಾಥ ಬಿ‌.ಅಬ್ಬಿಗೆರೆ, ಜಿ.ವೈ.ಪದ್ಮಾ, ಭೀಮರಾಯ ಹದ್ದಿನಾಳ, ಮಹ್ಮದ್ ಯೂನುಸ್ , ಕಾರ್ಯದರ್ಶಿಗಳಾದ ವಿ.ಅನೂಪ್‌ಕುಮಾರ್, ಹೆಚ್.ನರಸಿಂಹ ರಾಜು, ಓ.ಮಲ್ಲೇಶ್ , ಸಹ ಕಾರ್ಯದರ್ಶಿಗಳಾದ ಡಾ.ಕೆ.ಎಂ.ಸ್ವಾಮಿ, ಗುರುಬಸಯ್ಯ ಸ್ವಾಮಿ, ಜಂಟಿ ಕಾರ್ಯದರ್ಶಿಗಳಾದ ದಿನೇಶ ಬಿ, ಹೆಚ್. ಸುಧಾಕರ, ಅರುಣಾ ಜ್ಯೋತಿ, ಅಮನ್ ಕೊಡಗಲಿ, ನೂರ್ ಅಹ್ಮದ್, ಜಗದೀಶ ಗದಗ, ಸಚೇಂದ್ರ ಲಂಬು, ಲಕ್ಷ್ಮಣ ರಾವ್ ಕಪಗಲ್, ರಘುವೀರ ನಾಯಕ, ಶಿವಶಂಕರ ಮಂಡ್ಯ, ಮಲ್ಲಿಕಾರ್ಜುನ ಯಾದಗಿರಿ, ಮನೋಹರ ಬೆಳಗಾವಿ, ಸೇರಿದಂತೆ ಇನ್ನಿತರ ಸಂಪಾದಕರು ಭಾಗವಹಿಸಿದ್ದರು.

Leave a Reply

Your email address will not be published. Required fields are marked *

You missed

*ಬಡ ಕಾರ್ಮಿಕ ಮಕ್ಕಳ ಹಿತಕ್ಕಾಗಿ ಉಚಿತ ವಿವಾಹ ನೋಂದಣಿ -ಮೌನೇಶ ಹಳಿಸಗರ* ಕಲ್ಯಾಣ ಕರ್ನಾಟಕ ಕಾರ್ಮಿಕ ಹಿತ ರಕ್ಷಣಾ ಸಂಘಟನೆಯಿಂದ ಕಲ್ಯಾಣ ಕರ್ನಾಟಕ ಭಾಗದಲ್ಲಿ ಸತತವಾಗಿ ಕಳೆದ 3 ವರ್ಷಗಳಿಂದ ಕಾರ್ಮಿಕರ ಹಿತಕ್ಕಾಗಿ ಕಾರ್ಮಿಕರ ಹೇಳ್ಗೆಗಾಗಿ ಮತ್ತು ನಾಡು ನುಡಿ ಜಲಕ್ಕಾಗಿ ಶ್ರಮಿಸುತ್ತಾ ಬಂದಿದೆ. ಈಗ ಮೂರನೇ ವರ್ಷ ಮುಕ್ತಾಯಗೊಂಡು 4ನೇ ವರ್ಷಕ್ಕೆ ಪಾದರ್ಪಣೆ ಯಾಗುತ್ತಿರುವ ಹಿನ್ನೆಲೆಯಲ್ಲಿ ಬರುವ ಫೆಬ್ರವರಿ 8ರಂದು ಶಹಾಪುರ ನಗರದ ಹಳಿಸಗರದಲ್ಲಿ ಉಚಿತ ಸಾಮೂಹಿಕ ವಿವಾಹ ಸಮಾರಂಭ ಹಮ್ಮಿಕೊಂಡಿದ್ದು ಈ ಕಾರ್ಯಕ್ರಮಕ್ಕೆ ನಾಡಿನ ಹರ,ಗುರು ಚರಮೂರ್ತಿಗಳು ಹಾಗೂ ರಾಜಕೀಯ ಗಣ್ಯರು, ವಿವಿಧ ಸಂಘಟನೆಯ ಮುಖಂಡರು ಭಾಗವಹಿಸಲಿದ್ದಾರೆ. ಪ್ರತಿ ವರ್ಷದಂತೆ ಈ ವರ್ಷವು ಶಹಾಪೂರ ನಗರ ಹಳಿಸಗರ ಗ್ರಾಮದಲ್ಲಿ ಕಲ್ಯಾಣ ಕರ್ನಾಟಕ ಕಾರ್ಮಿಕ ಹಿತ ರಕ್ಷಣಾ ಸಂಘವು ಬಡವರ ಮಕ್ಕಳ ಹಿತಕ್ಕಾಗಿ ಈ ಸಂಘಟನೆಯ ಉಚಿತ ವಿವಾಹ ಕಾರ್ಯಕ್ರಮ ಹಮ್ಮಿಕೊಂಡಿದೆ ಹಾಗಾಗಿ ಸಗರ ನಾಡಿನ ಜನತೆಯು ಈ ಕಾರ್ಯಕ್ರಮದಲ್ಲಿ ತಮ್ಮ ಮಕ್ಕಳಿಗೆ ಮದುವೆ ಮಾಡುಲು ಇಚ್ಚಿಸುವವರು ಸಂಘಟನೆಯ ಸಂಸ್ಥಾಪಕ ಅಧ್ಯಕ್ಷರಾದ ಮೌನೇಶ ಹಳಿಸಗರ ಅವರನ್ನು ಸಂಪರ್ಕಿಸಬಹುದಾಗಿದೆ ತಿಳಿಸಿದ್ದಾರೆ. ಮೌನೇಶ ಹಳಿಸಗರ ಸಂಪರ್ಕಿಸುವ ಕರೆ ಸಂಖ್ಯೆ. 9731520852 -9741142898 *

ಸುದ್ದಿ ಮತ್ತು ಜಾಹಿರಾತುಗಳಿಗಾಗಿ ಸಂಪರ್ಕಿಸಿ : +91 99809 19019
error: Content is protected !!