ಜಾತಿ ನಿಂದನೆ, ಕರ್ತವ್ಯಕ್ಕೆ ಅಡ್ಡಿ ಪ್ರಕರಣ; ನಾಗರಾಜ ಹೊಂಗಲ್, ಮಹಾಂತೇಶ ಸಮಾಳದ, ನಾಗರಾಜ ನಗರಿ ಸೇರಿ ಒಂಬತ್ತು ಜನ ಆರೋಪ ಮುಕ್ತ.

ಬಾಗಲಕೋಟೆ; ಇಳಕಲ್ ನಗರಸಭೆ ಅವೈಜ್ಞಾನಿಕವಾಗಿ ಸಂಗ್ರಹಿಸುತ್ತಿದ್ದ ಇಳಕಲ್ ನಗರಸಭೆ ನೀತಿಯ ವಿರುದ್ಧ ಹೋರಾಟ ನಡೆಸಿದ್ದ ನಾಗರಾಜ ಹೊಂಗಲ್, ಮಹಾಂತೇಶ ಸಮಾಳದ, ನಾಗರಾಜ ನಗರಿ ಸೇರಿದಂತೆ ಒಂಬತ್ತು ಜನ ಹೋರಾಟಗಾರರು
ಜಾತಿ ನಿಂದನೆ ಮತ್ತು ಕರ್ತವ್ಯಚ್ಯುತಿ ಆರೋಪದಿಂದ ಮುಕ್ತಗೊಂಡಿದ್ದಾರೆ.

ಇಳಕಲ್ ನಗರಸಭೆ ವಾಸ್ತವಕ್ಕಿಂತಲೂ ನಾಲ್ಕು ಪಟ್ಟಿಗೂ ಅಧಿಕ ತೆರಿಗೆ ವಸೂಲಿ ಮಾಡುತ್ತಿದ್ದ ಕ್ರಮದ ವಿರುದ್ಧ ಜನ ಜಾಗೃತಿ ವೇದಿಕೆ ಹಾಗೂ ಕರ್ನಾಟಕ ರಕ್ಷಣಾ ವೇದಿಕೆಗಳು ಇಳಕಲ್ ನಗರದಲ್ಲಿ ಜಂಟಿಯಾಗಿ ಬೃಹತ್ ಆಂದೋಲನವನ್ನೇ ನಡೆಸಿತ್ತು.

ಜಿಲ್ಲಾಧಿಕಾರಿಗಳು ಮತ್ತು ಪೌರಾಡಳಿತ ನಿರ್ದೇಶನಾಲಯದ ನಿರ್ದೇಶಕರು, ಇಳಕಲ್ ನಗರಸಭೆ ತೆರಿಗೆ ಸಂಗ್ರಹದ ತಪ್ಪು ಧೋರಣೆಯನ್ನು ತಿದ್ದಿಕೊಳ್ಳಬೇಕೆಂದು ನಿರ್ದೇಶನ ನೀಡಿದ್ದರು.
ಇದೇ ಸಂದರ್ಭದಲ್ಲಿ ನಗರಸಭೆಯ ಅಂದಿನ ಪೌರಾಯುಕ್ತ ಅರವಿಂದ ಜಮಖಂಡಿ, ಕಂದಾಯ ಅಧಿಕಾರಿ ನಾಮದೇವ ಲಮಾಣಿ ಅವರು ಹೋರಾಟಗಾರರ ವಿರುದ್ಧ ಪ್ರತ್ಯೇಕವಾಗಿ 2016ರ ನವೆಂಬರನಲ್ಲಿ ಕರ್ತವ್ಯಕ್ಕೆ ಅಡ್ಡಿ ಮತ್ತು ಜಾತಿ ನಿಂದನೆ ಪ್ರಕರಣಗಳನ್ನು ದಾಖಲಿಸಿದ್ದರು.
ಕಳೆದ 7 ವರ್ಷಗಳಿಂದ ಜಾತಿ ನಿಂದನೆ ಪ್ರಕರಣದ ವಿಚಾರಣೆ ನಡೆಸಿದ ಬಾಗಲಕೋಟೆ ಜಿಲ್ಲಾ 2ನೇ ಹೆಚ್ಚವರಿ ನ್ಯಾಯಾಲಯ ಶನಿವಾರ ತೀರ್ಪು ನೀಡಿ, ಪ್ರಕರಣದಲ್ಲಿನ ಆರೋಪಿಗಳನ್ನೆಲ್ಲ ಆರೋಪ ಮುಕ್ತಗೊಳಿಸಿದರು.

ನ್ಯಾಯಾಲಯದ ಆದೇಶ ಪ್ರಾಮಾಣಿಕ ಹೋರಾಟ ಮತ್ತು ಸತ್ಯಕ್ಕೆ ಸಿಕ್ಕ ಜಯ ಎಂದು ನಾಗರಾಜ ಹೊಂಗಲ್, ಮಹಾಂತೇಶ ಸಮಾಳದ, ನಾಗರಾಜ ನಗರಿ ಮತ್ತಿತರರು ಸಂತಸ ವ್ಯಕ್ತಪಡಿಸಿದ್ದಾರೆ.

ಆರೋಪಿತರ ಪರ ನ್ಯಾಯವಾದಿ ರಮೇಶ್ ಬದ್ನೂರ ವಕಾಲತ್ತು ವಹಿಸಿದ್ದರು.

Leave a Reply

Your email address will not be published. Required fields are marked *

You missed

*ಬಡ ಕಾರ್ಮಿಕ ಮಕ್ಕಳ ಹಿತಕ್ಕಾಗಿ ಉಚಿತ ವಿವಾಹ ನೋಂದಣಿ -ಮೌನೇಶ ಹಳಿಸಗರ* ಕಲ್ಯಾಣ ಕರ್ನಾಟಕ ಕಾರ್ಮಿಕ ಹಿತ ರಕ್ಷಣಾ ಸಂಘಟನೆಯಿಂದ ಕಲ್ಯಾಣ ಕರ್ನಾಟಕ ಭಾಗದಲ್ಲಿ ಸತತವಾಗಿ ಕಳೆದ 3 ವರ್ಷಗಳಿಂದ ಕಾರ್ಮಿಕರ ಹಿತಕ್ಕಾಗಿ ಕಾರ್ಮಿಕರ ಹೇಳ್ಗೆಗಾಗಿ ಮತ್ತು ನಾಡು ನುಡಿ ಜಲಕ್ಕಾಗಿ ಶ್ರಮಿಸುತ್ತಾ ಬಂದಿದೆ. ಈಗ ಮೂರನೇ ವರ್ಷ ಮುಕ್ತಾಯಗೊಂಡು 4ನೇ ವರ್ಷಕ್ಕೆ ಪಾದರ್ಪಣೆ ಯಾಗುತ್ತಿರುವ ಹಿನ್ನೆಲೆಯಲ್ಲಿ ಬರುವ ಫೆಬ್ರವರಿ 8ರಂದು ಶಹಾಪುರ ನಗರದ ಹಳಿಸಗರದಲ್ಲಿ ಉಚಿತ ಸಾಮೂಹಿಕ ವಿವಾಹ ಸಮಾರಂಭ ಹಮ್ಮಿಕೊಂಡಿದ್ದು ಈ ಕಾರ್ಯಕ್ರಮಕ್ಕೆ ನಾಡಿನ ಹರ,ಗುರು ಚರಮೂರ್ತಿಗಳು ಹಾಗೂ ರಾಜಕೀಯ ಗಣ್ಯರು, ವಿವಿಧ ಸಂಘಟನೆಯ ಮುಖಂಡರು ಭಾಗವಹಿಸಲಿದ್ದಾರೆ. ಪ್ರತಿ ವರ್ಷದಂತೆ ಈ ವರ್ಷವು ಶಹಾಪೂರ ನಗರ ಹಳಿಸಗರ ಗ್ರಾಮದಲ್ಲಿ ಕಲ್ಯಾಣ ಕರ್ನಾಟಕ ಕಾರ್ಮಿಕ ಹಿತ ರಕ್ಷಣಾ ಸಂಘವು ಬಡವರ ಮಕ್ಕಳ ಹಿತಕ್ಕಾಗಿ ಈ ಸಂಘಟನೆಯ ಉಚಿತ ವಿವಾಹ ಕಾರ್ಯಕ್ರಮ ಹಮ್ಮಿಕೊಂಡಿದೆ ಹಾಗಾಗಿ ಸಗರ ನಾಡಿನ ಜನತೆಯು ಈ ಕಾರ್ಯಕ್ರಮದಲ್ಲಿ ತಮ್ಮ ಮಕ್ಕಳಿಗೆ ಮದುವೆ ಮಾಡುಲು ಇಚ್ಚಿಸುವವರು ಸಂಘಟನೆಯ ಸಂಸ್ಥಾಪಕ ಅಧ್ಯಕ್ಷರಾದ ಮೌನೇಶ ಹಳಿಸಗರ ಅವರನ್ನು ಸಂಪರ್ಕಿಸಬಹುದಾಗಿದೆ ತಿಳಿಸಿದ್ದಾರೆ. ಮೌನೇಶ ಹಳಿಸಗರ ಸಂಪರ್ಕಿಸುವ ಕರೆ ಸಂಖ್ಯೆ. 9731520852 -9741142898 *

ಸುದ್ದಿ ಮತ್ತು ಜಾಹಿರಾತುಗಳಿಗಾಗಿ ಸಂಪರ್ಕಿಸಿ : +91 99809 19019
error: Content is protected !!