ಬಿಡಾಡಿ ದನಗಳಿಂದ ಸಾರ್ವಜನಿಕರಿಗೆ ತೊಂದರೆ: ಕರವೇ ಅಧ್ಯಕ್ಷ ಚನ್ನೂರ ಆಕ್ರೋಶ

ಹುಣಸಗಿ ಪಟ್ಟಣದಲ್ಲಿ ದೇವಾಪುರ-ಮನಗೂಳಿ ರಾಜ್ಯ ಹೆದ್ದಾರಿ ಮೇಲೆ ಬಿಡಾಡಿ ದನಗಳು ಮಲಗುವುದರಿಂದ, ತಿರುಗಾಡುವುದರಿಂದ ಸಾರ್ವಜನಿಕರಿಗೆ ಮತ್ತು ವಾಹನ ಚಾಲಕರಿಗೆ ವಾಹನ ಚಲಾಯಿಸಲು ತುಂಬಾ ತೊಂದರೆಗಳು ಆಗ್ತಾ ಇರುವುದನ್ನು ಖಂಡಿಸಿ ಇಂದು ಕರ್ನಾಟಕ ರಕ್ಷಣಾ ವೇದಿಕೆ ( ನಾರಾಯಣ ಗೌಡ ಬಣ ) ತಾಲೂಕ ಘಟಕ ವತಿಯಿಂದ ಪಟ್ಟಣ ಪಂಚಾಯತ ಅಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿ, ಮಾತಾನಾಡಿದ ಕರವೇ ಅಧ್ಯಕ್ಷ ಬಸವರಾಜ ಚನ್ನೂರ ಅವರು ಹುಣಸಗಿ ಪಟ್ಟಣದಲ್ಲಿ ಬಿಡಾಡಿ ದನಗಳ ಸಮಸ್ಯೆಯನ್ನು ಬಗೆಹರಿಸುವ ಮೂಲಕ ಸಾರ್ವಜನಿಕರಿಗೆ ಮತ್ತು ವಾಹನ ಸವಾರರಿಗೆ ಅನುಕೂಲ ಮಾಡಿಕೊಡಬೇಕು ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಕರವೇ ತಾಲೂಕ ಘಟಕ ವತಿಯಿಂದ ಉಗ್ರವಾದ ಹೋರಾಟ ಮಾಡಬೇಕಾಗುತ್ತದೆ ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ಕರವೇ ತಾಲೂಕು ಅಧ್ಯಕ್ಷರಾದ ಬಸವರಾಜ ಚನ್ನುರು, ಶಿವಲಿಂಗ ಸಾಹುಕಾರ್ ಪಟ್ಟಣಶೆಟ್ಟಿ, ಮೌನೇಶ್ ಸಾಹುಕಾರ್ ಚಿಂಚೋಳಿ, ರಾಜು ಅವರಾದಿ, ನಿಂಗಣ್ಣ ಗುತ್ತೇದಾರ, ನಂದನಗೌಡ ಬಿರಾದಾರ, ಚನ್ನುಬಸ್ಸು, ಸುಭಾನ್ ನಬೋಜಿ,ಬಸವರಾಜ ಎಸ್, ಎಚ್, ಮಲ್ಲು ಮಾಳಿ,ಈಶ್ವರ್ ಅರಕೇರಿ ಜೆ ಇತರರು ಇದ್ದರು.

Leave a Reply

Your email address will not be published. Required fields are marked *

You missed

*ಬಡ ಕಾರ್ಮಿಕ ಮಕ್ಕಳ ಹಿತಕ್ಕಾಗಿ ಉಚಿತ ವಿವಾಹ ನೋಂದಣಿ -ಮೌನೇಶ ಹಳಿಸಗರ* ಕಲ್ಯಾಣ ಕರ್ನಾಟಕ ಕಾರ್ಮಿಕ ಹಿತ ರಕ್ಷಣಾ ಸಂಘಟನೆಯಿಂದ ಕಲ್ಯಾಣ ಕರ್ನಾಟಕ ಭಾಗದಲ್ಲಿ ಸತತವಾಗಿ ಕಳೆದ 3 ವರ್ಷಗಳಿಂದ ಕಾರ್ಮಿಕರ ಹಿತಕ್ಕಾಗಿ ಕಾರ್ಮಿಕರ ಹೇಳ್ಗೆಗಾಗಿ ಮತ್ತು ನಾಡು ನುಡಿ ಜಲಕ್ಕಾಗಿ ಶ್ರಮಿಸುತ್ತಾ ಬಂದಿದೆ. ಈಗ ಮೂರನೇ ವರ್ಷ ಮುಕ್ತಾಯಗೊಂಡು 4ನೇ ವರ್ಷಕ್ಕೆ ಪಾದರ್ಪಣೆ ಯಾಗುತ್ತಿರುವ ಹಿನ್ನೆಲೆಯಲ್ಲಿ ಬರುವ ಫೆಬ್ರವರಿ 8ರಂದು ಶಹಾಪುರ ನಗರದ ಹಳಿಸಗರದಲ್ಲಿ ಉಚಿತ ಸಾಮೂಹಿಕ ವಿವಾಹ ಸಮಾರಂಭ ಹಮ್ಮಿಕೊಂಡಿದ್ದು ಈ ಕಾರ್ಯಕ್ರಮಕ್ಕೆ ನಾಡಿನ ಹರ,ಗುರು ಚರಮೂರ್ತಿಗಳು ಹಾಗೂ ರಾಜಕೀಯ ಗಣ್ಯರು, ವಿವಿಧ ಸಂಘಟನೆಯ ಮುಖಂಡರು ಭಾಗವಹಿಸಲಿದ್ದಾರೆ. ಪ್ರತಿ ವರ್ಷದಂತೆ ಈ ವರ್ಷವು ಶಹಾಪೂರ ನಗರ ಹಳಿಸಗರ ಗ್ರಾಮದಲ್ಲಿ ಕಲ್ಯಾಣ ಕರ್ನಾಟಕ ಕಾರ್ಮಿಕ ಹಿತ ರಕ್ಷಣಾ ಸಂಘವು ಬಡವರ ಮಕ್ಕಳ ಹಿತಕ್ಕಾಗಿ ಈ ಸಂಘಟನೆಯ ಉಚಿತ ವಿವಾಹ ಕಾರ್ಯಕ್ರಮ ಹಮ್ಮಿಕೊಂಡಿದೆ ಹಾಗಾಗಿ ಸಗರ ನಾಡಿನ ಜನತೆಯು ಈ ಕಾರ್ಯಕ್ರಮದಲ್ಲಿ ತಮ್ಮ ಮಕ್ಕಳಿಗೆ ಮದುವೆ ಮಾಡುಲು ಇಚ್ಚಿಸುವವರು ಸಂಘಟನೆಯ ಸಂಸ್ಥಾಪಕ ಅಧ್ಯಕ್ಷರಾದ ಮೌನೇಶ ಹಳಿಸಗರ ಅವರನ್ನು ಸಂಪರ್ಕಿಸಬಹುದಾಗಿದೆ ತಿಳಿಸಿದ್ದಾರೆ. ಮೌನೇಶ ಹಳಿಸಗರ ಸಂಪರ್ಕಿಸುವ ಕರೆ ಸಂಖ್ಯೆ. 9731520852 -9741142898 *

ಸುದ್ದಿ ಮತ್ತು ಜಾಹಿರಾತುಗಳಿಗಾಗಿ ಸಂಪರ್ಕಿಸಿ : +91 99809 19019
error: Content is protected !!