*ಅಂಬೇಡ್ಕರ್ ಗೆ ಅಪಮಾನ ಅಮಿತ್ ಶಾ ರಾಜಿನಾಮೆಗೆ : ಶರಣಬಸವ ಸೈದಾಪುರ ಒತ್ತಾಯ*

ಶಹಾಪುರ: -ಸಂವಿಧಾನ ವಿಷಯದ ಕುರಿತು ಚರ್ಚೆಯಲ್ಲಿ ಗೃಹ ಸಚಿವ ಅಮಿತ್ ಶಾ ಮಾತನಾಡುವಾಗ ಡಾ. ಬಿ. ಆರ್ ಅಂಬೇಡ್ಕರ್ ರವರ ಬಗ್ಗೆ ಅಪಮಾನಿಸಿ ಮಾತನಾಡಿದ್ದಾರೆ ಅವರು ಕೂಡಲೇ ಕ್ಷಮೆ ಯಾಚಿಸಿ ರಾಜೀನಾಮೆ ನೀಡುವಂತೆ ಶಹಾಪುರ ತಾಲೂಕ ಕಾಂಗ್ರೆಸ್ ಯುವ ಮುಖಂಡರಾದ ಶರಣಬಸವ ಪೋಲಿಸ್ ಬಿರಾದಾರ ಸೈದಾಪುರ ಆಗ್ರಹಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು ಬಿಜೆಪಿಯ ಹಲವಾರು ನಾಯಕರು ಪದೇ ಪದೇ ಡಾ. ಬಿ .ಆರ್.ಅಂಬೇಡ್ಕರ್ ಮತ್ತು ಸವಿಧಾನ ಕುರಿತು ಇಲ್ಲಸಲ್ಲದ ಹೇಳಿಕೆ ನೀಡುತ್ತಾ ಬರುತ್ತಿದ್ದಾರೆ ಇದು ಅವರಿಗೆ ಶೊಭೆ ತರುವಂತದ್ದಲ್ಲ ಅಂಬೇಡ್ಕರ್ ಅಂಬೇಡ್ಕರ್ ಎಂದು ಎಷ್ಟು ಸಲ ಹೇಳುತ್ತೀರಾ ನೀವು ದೇವರ ಹೆಸರನ್ನು ಹೇಳಿದರೆ ಸ್ವರ್ಗಕ್ಕೆ ಹೋಗುತ್ತಿದ್ದೀರಿ ಎಂದು ನೀಡಿರುವ ಹೇಳಿಕೆ ಖಂಡನಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ದೇಶಕ್ಕೆ ಪವಿತ್ರವಾದ ಸಂವಿಧಾನವನ್ನು ನೀಡಿ ಬಡವರು ದೀನ ದಲಿತರ ಶೋಷಿತ ವರ್ಗದವರ ಏಳಿಗೆಗೆ ಹಗಲಿರಳು ಶ್ರಮಿಸಿ ಸಮ ಸಮಾಜ ನಿರ್ಮಾಣದ ಹರಿಕಾರ ಅಂತಹ ಮಹಾನ್ ನಾಯಕನ ವಿರುದ್ಧ ಈ ರೀತಿಯ ಹೇಳಿಕೆ ನೀಡಿರುವುದು ಬಾಲಿಶತನವಾದದ್ದು ಎಂದು ಅವರು ಕಿಡಿ ಕಾರಿದ್ದಾರೆ. ಜವಾಬ್ದಾರಿಯುತ ಸ್ಥಾನದಲ್ಲಿರುವ ಅಮಿತ್ ಶಾ ರವರು ಇಂತಹ ಹೇಳಿಕೆ ನೀಡಿರುವುದು ಎಷ್ಟರಮಟ್ಟಿಗೆ ಸರಿ ಬಿಜೆಪಿಯವರು ಸಂವಿಧಾನ ಮತ್ತು ಅಂಬೇಡ್ಕರ್ ವಿರೋಧಿ ಎಂಬುದು ಗೃಹ ಸಚಿವರು ತೋರಿಸಿಕೊಟ್ಟಿದ್ದಾರೆ ಕೂಡಲೇ ಪ್ರಧಾನ ಮಂತ್ರಿ ನರೇಂದ್ರ ಮೋದಿ ರವರು ಗೃಹ ಸಚಿವ ಅಮಿತ್ ಷಾ ರಾಜೀನಾಮೆ ಪಡೆಯುವಂತೆ ಶಹಾಪುರ ತಾಲೂಕ ಕಾಂಗ್ರೆಸ್ ಯುವ ಮುಖಂಡರಾದ ಶರಣಬಸವ ಪೋಲಿಸ್ ಬಿರಾದಾರ ಸೈದಾಪುರ ಒತ್ತಾಯಿಸಿದ್ದಾರೆ
ವರದಿ… ನಬಿರಸೂಲ ಎಮ್ ನದಾಫ್ ಯಾದಗಿರಿ

Leave a Reply

Your email address will not be published. Required fields are marked *

You missed

*ಬಡ ಕಾರ್ಮಿಕ ಮಕ್ಕಳ ಹಿತಕ್ಕಾಗಿ ಉಚಿತ ವಿವಾಹ ನೋಂದಣಿ -ಮೌನೇಶ ಹಳಿಸಗರ* ಕಲ್ಯಾಣ ಕರ್ನಾಟಕ ಕಾರ್ಮಿಕ ಹಿತ ರಕ್ಷಣಾ ಸಂಘಟನೆಯಿಂದ ಕಲ್ಯಾಣ ಕರ್ನಾಟಕ ಭಾಗದಲ್ಲಿ ಸತತವಾಗಿ ಕಳೆದ 3 ವರ್ಷಗಳಿಂದ ಕಾರ್ಮಿಕರ ಹಿತಕ್ಕಾಗಿ ಕಾರ್ಮಿಕರ ಹೇಳ್ಗೆಗಾಗಿ ಮತ್ತು ನಾಡು ನುಡಿ ಜಲಕ್ಕಾಗಿ ಶ್ರಮಿಸುತ್ತಾ ಬಂದಿದೆ. ಈಗ ಮೂರನೇ ವರ್ಷ ಮುಕ್ತಾಯಗೊಂಡು 4ನೇ ವರ್ಷಕ್ಕೆ ಪಾದರ್ಪಣೆ ಯಾಗುತ್ತಿರುವ ಹಿನ್ನೆಲೆಯಲ್ಲಿ ಬರುವ ಫೆಬ್ರವರಿ 8ರಂದು ಶಹಾಪುರ ನಗರದ ಹಳಿಸಗರದಲ್ಲಿ ಉಚಿತ ಸಾಮೂಹಿಕ ವಿವಾಹ ಸಮಾರಂಭ ಹಮ್ಮಿಕೊಂಡಿದ್ದು ಈ ಕಾರ್ಯಕ್ರಮಕ್ಕೆ ನಾಡಿನ ಹರ,ಗುರು ಚರಮೂರ್ತಿಗಳು ಹಾಗೂ ರಾಜಕೀಯ ಗಣ್ಯರು, ವಿವಿಧ ಸಂಘಟನೆಯ ಮುಖಂಡರು ಭಾಗವಹಿಸಲಿದ್ದಾರೆ. ಪ್ರತಿ ವರ್ಷದಂತೆ ಈ ವರ್ಷವು ಶಹಾಪೂರ ನಗರ ಹಳಿಸಗರ ಗ್ರಾಮದಲ್ಲಿ ಕಲ್ಯಾಣ ಕರ್ನಾಟಕ ಕಾರ್ಮಿಕ ಹಿತ ರಕ್ಷಣಾ ಸಂಘವು ಬಡವರ ಮಕ್ಕಳ ಹಿತಕ್ಕಾಗಿ ಈ ಸಂಘಟನೆಯ ಉಚಿತ ವಿವಾಹ ಕಾರ್ಯಕ್ರಮ ಹಮ್ಮಿಕೊಂಡಿದೆ ಹಾಗಾಗಿ ಸಗರ ನಾಡಿನ ಜನತೆಯು ಈ ಕಾರ್ಯಕ್ರಮದಲ್ಲಿ ತಮ್ಮ ಮಕ್ಕಳಿಗೆ ಮದುವೆ ಮಾಡುಲು ಇಚ್ಚಿಸುವವರು ಸಂಘಟನೆಯ ಸಂಸ್ಥಾಪಕ ಅಧ್ಯಕ್ಷರಾದ ಮೌನೇಶ ಹಳಿಸಗರ ಅವರನ್ನು ಸಂಪರ್ಕಿಸಬಹುದಾಗಿದೆ ತಿಳಿಸಿದ್ದಾರೆ. ಮೌನೇಶ ಹಳಿಸಗರ ಸಂಪರ್ಕಿಸುವ ಕರೆ ಸಂಖ್ಯೆ. 9731520852 -9741142898 *

ಸುದ್ದಿ ಮತ್ತು ಜಾಹಿರಾತುಗಳಿಗಾಗಿ ಸಂಪರ್ಕಿಸಿ : +91 99809 19019
error: Content is protected !!