ಇಳಕಲ್ ಅರ್ಬನ್ ಬ್ಯಾಂಕ್ ಚುನಾವಣೆಗೆ 55 ಜನ ನಾಮಪತ್ರ ಸ್ವೀಕೃತ, ಓರ್ವರು ಅವಿರೋಧ ಆಯ್ಕೆ.

ಇಳಕಲ್:- ನಗರದ ಪ್ರತಿಷ್ಠಿತ ಹಣಕಾಸು ಸಂಸ್ಥೆಯಾದ ಇಳಕಲ್ ಕೋ ಆಪರೇಟಿವ್ ಅರ್ಬನ್ ಬ್ಯಾಂಕ್ ಗೆ 2025ರಿಂದ 2030 ನೇ ಅವಧಿಯ ಚುನಾವಣೆಗೆ ಕಳೆದ ಒಂದು ವಾರದಿಂದ 55 ನಾಮಪತ್ರಗಳನ್ನು ಸಲ್ಲಿಸಿದ್ದಾರೆ . ಅವುಗಳನ್ನು ಸ್ವೀಕರಿಸಲಾಗಿದೆ ಎಂದು ಚುನಾವಣಾಧಿಕಾರಿ ಮಹದೇವ ಕುಂಬಾರ ತಿಳಿಸಿದ್ದಾರೆ. ಸಾಮಾನ್ಯ ಕ್ಷೇತ್ರದಿಂದ 35 ಜನರು ,ಹಿಂದುಳಿದ ವರ್ಗ ಅ ದಿಂದ ಐವರು,ಹಿಂದುಳಿದ ಬ ವರ್ಗಗಳ ಸ್ಥಾನಕ್ಕೆ ಮೂವರು, ಪರಿಶಿಷ್ಟ ಜಾತಿ ಸ್ಥಾನಕ್ಕೆ ಆರು ಜನ , ಮಹಿಳಾ ಸ್ಥಾನಕ್ಕೆ ಆರು ಜನರು ಸೇರಿದಂತೆ ಒಟ್ಟು 55 ಅಭ್ಯರ್ಥಿಗಳು ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದಾರೆ. ಪರಿಶಿಷ್ಟ ಪಂಗಡದ ಸ್ಥಾನಕ್ಕೆ ನಗರದ ಹಿರಿಯ ಗ್ರಾನೈಟ್ ಉದ್ದಿಮೆದಾರ ಶಾಂತಕುಮಾರ ಸುರಪುರ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನಾಮಪತ್ರಗಳನ್ನು ಹಿಂಪಡೆಯಲು 31 ಮಂಗಳವಾರ ಕೊನೆಯ ದಿನವಾಗಿದೆ.ಒಟ್ಟು 16 ಸ್ಥಾನಗಳಿಗೆ ಚುನಾವಣೆ ನಡೆಯಬೇಕಿದೆ.ಈ ಬಾರಿಯ ಚುನಾವಣೆಯು ಜಿದ್ದಾಜಿದ್ದಿನ ನಡುವೆ ನಡೆಯುವ ಸಾಧ್ಯತೆಗಳಿವೆ.
ವರದಿ ಕೆ ಎಚ್ ಸೋಲಾಪೂರ ಇಳಕಲ್.

Leave a Reply

Your email address will not be published. Required fields are marked *

You missed

*ಬಡ ಕಾರ್ಮಿಕ ಮಕ್ಕಳ ಹಿತಕ್ಕಾಗಿ ಉಚಿತ ವಿವಾಹ ನೋಂದಣಿ -ಮೌನೇಶ ಹಳಿಸಗರ* ಕಲ್ಯಾಣ ಕರ್ನಾಟಕ ಕಾರ್ಮಿಕ ಹಿತ ರಕ್ಷಣಾ ಸಂಘಟನೆಯಿಂದ ಕಲ್ಯಾಣ ಕರ್ನಾಟಕ ಭಾಗದಲ್ಲಿ ಸತತವಾಗಿ ಕಳೆದ 3 ವರ್ಷಗಳಿಂದ ಕಾರ್ಮಿಕರ ಹಿತಕ್ಕಾಗಿ ಕಾರ್ಮಿಕರ ಹೇಳ್ಗೆಗಾಗಿ ಮತ್ತು ನಾಡು ನುಡಿ ಜಲಕ್ಕಾಗಿ ಶ್ರಮಿಸುತ್ತಾ ಬಂದಿದೆ. ಈಗ ಮೂರನೇ ವರ್ಷ ಮುಕ್ತಾಯಗೊಂಡು 4ನೇ ವರ್ಷಕ್ಕೆ ಪಾದರ್ಪಣೆ ಯಾಗುತ್ತಿರುವ ಹಿನ್ನೆಲೆಯಲ್ಲಿ ಬರುವ ಫೆಬ್ರವರಿ 8ರಂದು ಶಹಾಪುರ ನಗರದ ಹಳಿಸಗರದಲ್ಲಿ ಉಚಿತ ಸಾಮೂಹಿಕ ವಿವಾಹ ಸಮಾರಂಭ ಹಮ್ಮಿಕೊಂಡಿದ್ದು ಈ ಕಾರ್ಯಕ್ರಮಕ್ಕೆ ನಾಡಿನ ಹರ,ಗುರು ಚರಮೂರ್ತಿಗಳು ಹಾಗೂ ರಾಜಕೀಯ ಗಣ್ಯರು, ವಿವಿಧ ಸಂಘಟನೆಯ ಮುಖಂಡರು ಭಾಗವಹಿಸಲಿದ್ದಾರೆ. ಪ್ರತಿ ವರ್ಷದಂತೆ ಈ ವರ್ಷವು ಶಹಾಪೂರ ನಗರ ಹಳಿಸಗರ ಗ್ರಾಮದಲ್ಲಿ ಕಲ್ಯಾಣ ಕರ್ನಾಟಕ ಕಾರ್ಮಿಕ ಹಿತ ರಕ್ಷಣಾ ಸಂಘವು ಬಡವರ ಮಕ್ಕಳ ಹಿತಕ್ಕಾಗಿ ಈ ಸಂಘಟನೆಯ ಉಚಿತ ವಿವಾಹ ಕಾರ್ಯಕ್ರಮ ಹಮ್ಮಿಕೊಂಡಿದೆ ಹಾಗಾಗಿ ಸಗರ ನಾಡಿನ ಜನತೆಯು ಈ ಕಾರ್ಯಕ್ರಮದಲ್ಲಿ ತಮ್ಮ ಮಕ್ಕಳಿಗೆ ಮದುವೆ ಮಾಡುಲು ಇಚ್ಚಿಸುವವರು ಸಂಘಟನೆಯ ಸಂಸ್ಥಾಪಕ ಅಧ್ಯಕ್ಷರಾದ ಮೌನೇಶ ಹಳಿಸಗರ ಅವರನ್ನು ಸಂಪರ್ಕಿಸಬಹುದಾಗಿದೆ ತಿಳಿಸಿದ್ದಾರೆ. ಮೌನೇಶ ಹಳಿಸಗರ ಸಂಪರ್ಕಿಸುವ ಕರೆ ಸಂಖ್ಯೆ. 9731520852 -9741142898 *

ಸುದ್ದಿ ಮತ್ತು ಜಾಹಿರಾತುಗಳಿಗಾಗಿ ಸಂಪರ್ಕಿಸಿ : +91 99809 19019
error: Content is protected !!