ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ

ಸರಳ ಸಜ್ಜನಿಕೆಯ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಒಳಗೊಂಡು ಮೂವರಿಗೆ ಗೌರವ ಡಾಕ್ಟರೇಟ್ ಪದವಿ

ದಾವಣಗೆರೆ : ಸರಳ ಸಜ್ಜನಿಕೆಯ ರಾಜ್ಯದ ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಎಲ್.ಜಾರಕಿಹೊಳಿ ಸೇರಿದಂತೆ ಶ್ರೇಷ್ಠ ವ್ಯಕ್ತಿತ್ವ ಹೊಂದಿರುವ ಮೂವರಿಗೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ಪದವಿ ‌ನೀಡಲಿದೆ.

ಐಡಿಯಲ್ ಎಜ್ಯುಕೇಷನ್ ಸೊಸೈಟಿ ಛೇರ್ಮನ್ ಸಿ.ಎಂ.ಇರ್ಪಾನುಲ್ಲಾ ಷರೀಫ್ ಮತ್ತು ಕಲಬುರಗಿಯ ಶರಣಬಸವೇಶ್ವರ ವಿದ್ಯಾ ವರ್ಧಕ ಸಂಘದ ಛೇರ್ಮನ್ ಡಾ.ದಾಕ್ಷಯಿಣಿ ಎಸ್.ಅಪ್ಪ ಇವರಿಗೆ ಕೂಡ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ಪದವಿ ನೀಡಲಿದೆ.

ಈ ಮೂವರು ಗಣ್ಯರಿಗೆ ಗೌರವ ಡಾಕ್ಟರೇಟ್ ಪದವಿಯನ್ನು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ತನ್ನ 20 ನೇ ವಾರ್ಷಿಕ ಘಟಿಕೋತ್ಸವದಲ್ಲಿ ಪ್ರದಾನ ಮಾಡಲಿದೆ.

ಈ ಮೂವರು ಗಣ್ಯರಿಗೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ 20 ನೇ ವಾರ್ಷಿಕ ಘಟಿಕೋತ್ಸವದಲ್ಲಿ ಗೌರವ ಡಾಕ್ಟರೇಟ್ ಪದವಿ ನೀಡಲು ಕರ್ನಾಟಕ ರಾಜ್ಯದ ರಾಜ್ಯಪಾಲರು ಹಾಗೂ ವಿಶ್ವವಿದ್ಯಾಲಯದ ಕುಲಪತಿಗಳಾದ ಥಾವರ್ ಚಂದ್ ಗೆಹಲೋಥ್ ಅವರು ಒಪ್ಪಿಗೆ ನೀಡಿದ್ದು, ರಾಜ್ಯಪಾಲರ ಅಧೀನ‌ ಕಾರ್ಯದರ್ಶಿ ಬಿ.ಬಿ.ಪ್ರಶಾಂತ್ ಕುಮಾರ್ ಅವರು ಮೈಸೂರಿನ
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಉಪಕುಲಪತಿಗೆ ದಿನಾಂಕ:13-03-2025 ರಂದು ಪತ್ರ ಬರೆದು ತಿಳಿಸಿದ್ದಾರೆ.

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಗೌರವ ಡಾಕ್ಟರೇಟ್ ಪದವಿಗೆ ಭಾಜನರಾದ ಲೋಕೋಪಯೋಗಿ ಸಚಿವರು, ವಾಲ್ಮೀಕಿ ನಾಯಕ ಸಮುದಾಯದ ಮತ್ತು ಅಹಿಂದ ಮುಖಂಡರು, ಮಾನವ ಬಂಧುತ್ವ ವೇದಿಕೆ ಸಂಸ್ಥಾಪಕರಾದ ಸತೀಶ್ ಜಾರಕಿಹೊಳಿ ಅವರಿಗೆ ಕರ್ನಾಟಕ ರಾಜ್ಯ ಪರಿಶಿಷ್ಟ ಪಂಗಡಗಳ ಸರ್ಕಾರಿ ನೌಕರರ ಸಂಘದ ಗೌರವಾಧ್ಯಕ್ಷರು, ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ ಸಂಘದ ರಾಜ್ಯಾಧ್ಯಕ್ಷರು ಹಾಗೂ ದಾವಣಗೆರೆ ಪಬ್ಲಿಕ್ ವಾಯ್ಸ್ ಪತ್ರಿಕೆಯ ಪ್ರಧಾನ ಸಂಪಾದಕರಾದ ಎ.ಸಿ.ತಿಪ್ಪೇಸ್ವಾಮಿ ಅವರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

Leave a Reply

Your email address will not be published. Required fields are marked *

You missed

*ಬಡ ಕಾರ್ಮಿಕ ಮಕ್ಕಳ ಹಿತಕ್ಕಾಗಿ ಉಚಿತ ವಿವಾಹ ನೋಂದಣಿ -ಮೌನೇಶ ಹಳಿಸಗರ* ಕಲ್ಯಾಣ ಕರ್ನಾಟಕ ಕಾರ್ಮಿಕ ಹಿತ ರಕ್ಷಣಾ ಸಂಘಟನೆಯಿಂದ ಕಲ್ಯಾಣ ಕರ್ನಾಟಕ ಭಾಗದಲ್ಲಿ ಸತತವಾಗಿ ಕಳೆದ 3 ವರ್ಷಗಳಿಂದ ಕಾರ್ಮಿಕರ ಹಿತಕ್ಕಾಗಿ ಕಾರ್ಮಿಕರ ಹೇಳ್ಗೆಗಾಗಿ ಮತ್ತು ನಾಡು ನುಡಿ ಜಲಕ್ಕಾಗಿ ಶ್ರಮಿಸುತ್ತಾ ಬಂದಿದೆ. ಈಗ ಮೂರನೇ ವರ್ಷ ಮುಕ್ತಾಯಗೊಂಡು 4ನೇ ವರ್ಷಕ್ಕೆ ಪಾದರ್ಪಣೆ ಯಾಗುತ್ತಿರುವ ಹಿನ್ನೆಲೆಯಲ್ಲಿ ಬರುವ ಫೆಬ್ರವರಿ 8ರಂದು ಶಹಾಪುರ ನಗರದ ಹಳಿಸಗರದಲ್ಲಿ ಉಚಿತ ಸಾಮೂಹಿಕ ವಿವಾಹ ಸಮಾರಂಭ ಹಮ್ಮಿಕೊಂಡಿದ್ದು ಈ ಕಾರ್ಯಕ್ರಮಕ್ಕೆ ನಾಡಿನ ಹರ,ಗುರು ಚರಮೂರ್ತಿಗಳು ಹಾಗೂ ರಾಜಕೀಯ ಗಣ್ಯರು, ವಿವಿಧ ಸಂಘಟನೆಯ ಮುಖಂಡರು ಭಾಗವಹಿಸಲಿದ್ದಾರೆ. ಪ್ರತಿ ವರ್ಷದಂತೆ ಈ ವರ್ಷವು ಶಹಾಪೂರ ನಗರ ಹಳಿಸಗರ ಗ್ರಾಮದಲ್ಲಿ ಕಲ್ಯಾಣ ಕರ್ನಾಟಕ ಕಾರ್ಮಿಕ ಹಿತ ರಕ್ಷಣಾ ಸಂಘವು ಬಡವರ ಮಕ್ಕಳ ಹಿತಕ್ಕಾಗಿ ಈ ಸಂಘಟನೆಯ ಉಚಿತ ವಿವಾಹ ಕಾರ್ಯಕ್ರಮ ಹಮ್ಮಿಕೊಂಡಿದೆ ಹಾಗಾಗಿ ಸಗರ ನಾಡಿನ ಜನತೆಯು ಈ ಕಾರ್ಯಕ್ರಮದಲ್ಲಿ ತಮ್ಮ ಮಕ್ಕಳಿಗೆ ಮದುವೆ ಮಾಡುಲು ಇಚ್ಚಿಸುವವರು ಸಂಘಟನೆಯ ಸಂಸ್ಥಾಪಕ ಅಧ್ಯಕ್ಷರಾದ ಮೌನೇಶ ಹಳಿಸಗರ ಅವರನ್ನು ಸಂಪರ್ಕಿಸಬಹುದಾಗಿದೆ ತಿಳಿಸಿದ್ದಾರೆ. ಮೌನೇಶ ಹಳಿಸಗರ ಸಂಪರ್ಕಿಸುವ ಕರೆ ಸಂಖ್ಯೆ. 9731520852 -9741142898 *

ಸುದ್ದಿ ಮತ್ತು ಜಾಹಿರಾತುಗಳಿಗಾಗಿ ಸಂಪರ್ಕಿಸಿ : +91 99809 19019
error: Content is protected !!