ಅಬ್ದುಲ್ ಸಾಬ ಬಿ.ಕೊಡಗಲಿ ಪೈಗಂಬರವಾಸಿಗಳಾದರು..
ಬಾಗಲಕೋಟೆ/ ಇಳಕಲ್ : ನಗರದ ಮುಸ್ಲಿಂ ಸಮುದಾಯದ,ಹಾಯ್ ಮಿಂಚು ಪತ್ರಿಕೆಯ ಸಂಸ್ಥಾಪಕ ಸಂಪಾದಕ ಮಂಡಳಿ ಸದಸ್ಯರು, ಲಿಂ.ಹಾಜಿ ಬಾವಾಸಾಹೇಬ ಕೊಡಗಲಿಯವರ ದ್ವಿತೀಯ ಸುಪುತ್ರರಾದ ಅಬ್ದುಲಸಾಬ ಬಿ.ಕೊಡಗಲಿಯವರು (70)ಇಂದು 9/04/2025 ಬುಧವಾರ, ಬೆ.7.30 ಗಂಟೆಗೆ ಪೈಗಂಬರವಾಸಿಗಳಾದರು ಎಂದು ತಿಳಿಸಲು ವಿಷಾದಿಸುತ್ತೇವೆ..
ಮೃತರು ಹೆಂಡತಿ, ಮೂರು ಗಂಡು ಮಕ್ಕಳು, ಎರಡು ಹೆಣ್ಣು ಮಕ್ಕಳು, 5 ಜನ ಸಹೋದರರು, 5 ಜನ ಸಹೋದರಿಯರು, ಮೊಮ್ಮಕ್ಕಳು ಹಾಗೂ ಅಪಾರ ಬಂಧು ಬಳಗವನ್ನು ಬಿಟ್ಟು ಅಗಲಿದ್ದು, ಸಂಜೆ 5-30 ಗಂಟೆಯ ವರೆಗೆ ಅಂತಿಮ ದರ್ಶನದಲ್ಲಿ ನಗರದ ಅಪಾರ ಸಂಖ್ಯೆಯಲ್ಲಿ ಪ್ರಮುಖ ಗಣ್ಯರು ಪಾಲ್ಗೊಂಡಿದ್ದರು.
ಸಂತಾಪ : ಕರ್ನಾಟಕ ರಾಜ್ಯ ವೀರ ಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷರು, ಹುನಗುಂದ ಮತಕ್ಷೇತ್ರದ ಶಾಸಕರಾದ ವಿಜಯಾನಂದ ಎಸ್.ಕಾಶಪ್ಪನವರ, ಬಾಗಲಕೋಟೆ ಜಿಲ್ಲಾ ಕಾಂಗ್ರೇಸ್ ಉಪಾಧ್ಯಕ್ಷ ವೆಂಕಟೇಶ ಸಾಕಾ, ಜಿ.ಪಂ.ಮಾಜಿ ಸದಸ್ಯ ನರಗುಂದ ಮಹಾಂತೇಶ, ನಗರಸಭೆ ಸದಸ್ಯರು, ಇತರೆ ಪ್ರಮುಖ ಗಣ್ಯರು, ಅಮನ್ ವೆಲ್ ಫೇರ ಅಸೋಸಿಯೇಷನ್ ಸದಸ್ಯರು, ಏಕ ಮಿನಾರ ಮಸಜಿದ ಜಮಾತಿನ ಎಲ್ಲ ಸದಸ್ಯರು ಕೊಡಗಲಿ ಪರಿವಾರದವರಿಗೆ ಅಬ್ದುಲಸಾಬ ಕೊಡಗಲಿ ಯವರ ಅಗಲಿಕೆಯೂ ದೇವರು ಅವರ ನೋವು ಭರಿಸಲಿ ಎಂದು ಸಂತಾಪ ಸೂಚಿಸಿದರು.

Leave a Reply

Your email address will not be published. Required fields are marked *

You missed

*ಬಡ ಕಾರ್ಮಿಕ ಮಕ್ಕಳ ಹಿತಕ್ಕಾಗಿ ಉಚಿತ ವಿವಾಹ ನೋಂದಣಿ -ಮೌನೇಶ ಹಳಿಸಗರ* ಕಲ್ಯಾಣ ಕರ್ನಾಟಕ ಕಾರ್ಮಿಕ ಹಿತ ರಕ್ಷಣಾ ಸಂಘಟನೆಯಿಂದ ಕಲ್ಯಾಣ ಕರ್ನಾಟಕ ಭಾಗದಲ್ಲಿ ಸತತವಾಗಿ ಕಳೆದ 3 ವರ್ಷಗಳಿಂದ ಕಾರ್ಮಿಕರ ಹಿತಕ್ಕಾಗಿ ಕಾರ್ಮಿಕರ ಹೇಳ್ಗೆಗಾಗಿ ಮತ್ತು ನಾಡು ನುಡಿ ಜಲಕ್ಕಾಗಿ ಶ್ರಮಿಸುತ್ತಾ ಬಂದಿದೆ. ಈಗ ಮೂರನೇ ವರ್ಷ ಮುಕ್ತಾಯಗೊಂಡು 4ನೇ ವರ್ಷಕ್ಕೆ ಪಾದರ್ಪಣೆ ಯಾಗುತ್ತಿರುವ ಹಿನ್ನೆಲೆಯಲ್ಲಿ ಬರುವ ಫೆಬ್ರವರಿ 8ರಂದು ಶಹಾಪುರ ನಗರದ ಹಳಿಸಗರದಲ್ಲಿ ಉಚಿತ ಸಾಮೂಹಿಕ ವಿವಾಹ ಸಮಾರಂಭ ಹಮ್ಮಿಕೊಂಡಿದ್ದು ಈ ಕಾರ್ಯಕ್ರಮಕ್ಕೆ ನಾಡಿನ ಹರ,ಗುರು ಚರಮೂರ್ತಿಗಳು ಹಾಗೂ ರಾಜಕೀಯ ಗಣ್ಯರು, ವಿವಿಧ ಸಂಘಟನೆಯ ಮುಖಂಡರು ಭಾಗವಹಿಸಲಿದ್ದಾರೆ. ಪ್ರತಿ ವರ್ಷದಂತೆ ಈ ವರ್ಷವು ಶಹಾಪೂರ ನಗರ ಹಳಿಸಗರ ಗ್ರಾಮದಲ್ಲಿ ಕಲ್ಯಾಣ ಕರ್ನಾಟಕ ಕಾರ್ಮಿಕ ಹಿತ ರಕ್ಷಣಾ ಸಂಘವು ಬಡವರ ಮಕ್ಕಳ ಹಿತಕ್ಕಾಗಿ ಈ ಸಂಘಟನೆಯ ಉಚಿತ ವಿವಾಹ ಕಾರ್ಯಕ್ರಮ ಹಮ್ಮಿಕೊಂಡಿದೆ ಹಾಗಾಗಿ ಸಗರ ನಾಡಿನ ಜನತೆಯು ಈ ಕಾರ್ಯಕ್ರಮದಲ್ಲಿ ತಮ್ಮ ಮಕ್ಕಳಿಗೆ ಮದುವೆ ಮಾಡುಲು ಇಚ್ಚಿಸುವವರು ಸಂಘಟನೆಯ ಸಂಸ್ಥಾಪಕ ಅಧ್ಯಕ್ಷರಾದ ಮೌನೇಶ ಹಳಿಸಗರ ಅವರನ್ನು ಸಂಪರ್ಕಿಸಬಹುದಾಗಿದೆ ತಿಳಿಸಿದ್ದಾರೆ. ಮೌನೇಶ ಹಳಿಸಗರ ಸಂಪರ್ಕಿಸುವ ಕರೆ ಸಂಖ್ಯೆ. 9731520852 -9741142898 *

ಸುದ್ದಿ ಮತ್ತು ಜಾಹಿರಾತುಗಳಿಗಾಗಿ ಸಂಪರ್ಕಿಸಿ : +91 99809 19019
error: Content is protected !!