ಅಸೋಸಿಯೇಷನ್ ಆಫ್ ಸ್ಮಾಲ್ & ಮಿಡಿಯಂ ನ್ಯೂಸ್ ಪೇಪರ್ ಆಫ್ ಇಂಡಿಯಾದ 31 ,ನೇ ರಾಷ್ಟ್ರೀಯ ಪತ್ರಿಕಾ ಸಮ್ಮೇಳನದಲ್ಲಿ ಕರ್ನಾಟಕದ ನೂತನ ರಾಜ್ಯಾಧ್ಯಕ್ಷರಾಗಿ ಅಮನ್ ಕೊಡಗಲಿ ಬೆಂಗಳೂರು ಆಯ್ಕೆ…

ದೆಹಲಿ/ ಜಯಪುರ : 27.
ಅಸೋಸಿಯೇಷನ್ ಆಫ್ ಸ್ಮಾಲ್ & ಮಿಡಿಯಂ ನ್ಯೂಸ್ ಪೇಪರ್ ಆಫ್ ಇಂಡಿಯಾದ ರಾಷ್ಟ್ರೀಯ ಸಮ್ಮೇಳನವು ರಾಜಸ್ಥಾನ ದ ರಾಜಧಾನಿ ಜಯಪುರದಲ್ಲಿ ರಾಷ್ಟ್ರೀಯ ಅಧ್ಯಕ್ಷರಾದ ಕೆ.ಡಿ.ಚಂಡೋಲಾ ಅವರ ಅಧ್ಯಕ್ಷತೆಯಲ್ಲಿ ಯಶಸ್ವಿಯಾಗಿ ಜರುಗಿತು.
ಈ ಸಮ್ಮೇಳನದಲ್ಲಿ ಕರ್ನಾಟಕದ ನೂತನ ರಾಜ್ಯಾಧ್ಯಕ್ಷರಾಗಿ ಅಮನ್ ಕೊಡಗಲಿ ಹಾಗೂ ರಾಷ್ತ್ರೀಯ ಕಾರ್ಯಕಾರಿಣಿ ಸದಸ್ಯರಾಗಿ ವೇಣುಗೋಪಾಲ್ ನಾಯಕ ಮತ್ತು ತಾರಿಕಾ ಬೇಲ್ಕರ್ ಇವರನ್ನು ಸರ್ವ ಸದಸ್ಯರ ಸಮ್ಮುಖದಲ್ಲಿ ಆಯ್ಕೆ ಮಾಡಲಾಯಿತು ಎಂದು ರಾಷ್ಟ್ರೀಯ ಅಧ್ಯಕ್ಷ ರಾದ ಕೆ.ಡಿ.ಚಂಡೋಲಾರವರು ಘೋಶಿಸಿದರು. ರಾಜ್ಯ ದಲ್ಲಿ ಸಂಘವನ್ನು ಬಲಿಷ್ಟವಾಗಿ ಬೆಳೆಸಿ ಎಲ್ಲರನ್ನು ವಿಶ್ವಾಸಕ್ಕೆ ತಗೆದುಕೊಂಡು ಸಂಘಟಿಸಲು ತಿಳಿಸಿದರು.
ಅದರಂತೆ ರಾಜ್ಯ ಸಮೀತಿ ಸದಸ್ಯರಾಗಿ ದತ್ತಾತ್ರೇಯ ವಿ.ಪವಾರ, ಹುಬ್ಬಳ್ಳಿ, ಅಕ್ಮಲ್ ಪಾಷಾ ಮೈಸೂರು, ಹಾಗೂ ಶೇಖ ನಿಸಾರುದ್ದೀನ, ಬಾಬರ್,ರಾಯಚೂರು ಮತ್ತು ಡಾ.ಜಲಾಲುದ್ದೀನ ಅಕ್ಬರ್ , ನಮ್ಮೂರು ಶಾಸಕರು ಪತ್ರಿಕೆಯ ಸಂಪಾದಕರು, ಕಲಬುರ್ಗಿ, ಇವರುಗಳನ್ನು ಆಯ್ಕೆ ಮಾಡಲಾಯಿತು ಎಂದು ರಾಷ್ಟ್ರೀಯ ಕಾರ್ಯದರ್ಶಿ ಕಟ್ರಿಯಾ ತಿಳಿಸಿದರು.

Leave a Reply

Your email address will not be published. Required fields are marked *

You missed

*ಬಡ ಕಾರ್ಮಿಕ ಮಕ್ಕಳ ಹಿತಕ್ಕಾಗಿ ಉಚಿತ ವಿವಾಹ ನೋಂದಣಿ -ಮೌನೇಶ ಹಳಿಸಗರ* ಕಲ್ಯಾಣ ಕರ್ನಾಟಕ ಕಾರ್ಮಿಕ ಹಿತ ರಕ್ಷಣಾ ಸಂಘಟನೆಯಿಂದ ಕಲ್ಯಾಣ ಕರ್ನಾಟಕ ಭಾಗದಲ್ಲಿ ಸತತವಾಗಿ ಕಳೆದ 3 ವರ್ಷಗಳಿಂದ ಕಾರ್ಮಿಕರ ಹಿತಕ್ಕಾಗಿ ಕಾರ್ಮಿಕರ ಹೇಳ್ಗೆಗಾಗಿ ಮತ್ತು ನಾಡು ನುಡಿ ಜಲಕ್ಕಾಗಿ ಶ್ರಮಿಸುತ್ತಾ ಬಂದಿದೆ. ಈಗ ಮೂರನೇ ವರ್ಷ ಮುಕ್ತಾಯಗೊಂಡು 4ನೇ ವರ್ಷಕ್ಕೆ ಪಾದರ್ಪಣೆ ಯಾಗುತ್ತಿರುವ ಹಿನ್ನೆಲೆಯಲ್ಲಿ ಬರುವ ಫೆಬ್ರವರಿ 8ರಂದು ಶಹಾಪುರ ನಗರದ ಹಳಿಸಗರದಲ್ಲಿ ಉಚಿತ ಸಾಮೂಹಿಕ ವಿವಾಹ ಸಮಾರಂಭ ಹಮ್ಮಿಕೊಂಡಿದ್ದು ಈ ಕಾರ್ಯಕ್ರಮಕ್ಕೆ ನಾಡಿನ ಹರ,ಗುರು ಚರಮೂರ್ತಿಗಳು ಹಾಗೂ ರಾಜಕೀಯ ಗಣ್ಯರು, ವಿವಿಧ ಸಂಘಟನೆಯ ಮುಖಂಡರು ಭಾಗವಹಿಸಲಿದ್ದಾರೆ. ಪ್ರತಿ ವರ್ಷದಂತೆ ಈ ವರ್ಷವು ಶಹಾಪೂರ ನಗರ ಹಳಿಸಗರ ಗ್ರಾಮದಲ್ಲಿ ಕಲ್ಯಾಣ ಕರ್ನಾಟಕ ಕಾರ್ಮಿಕ ಹಿತ ರಕ್ಷಣಾ ಸಂಘವು ಬಡವರ ಮಕ್ಕಳ ಹಿತಕ್ಕಾಗಿ ಈ ಸಂಘಟನೆಯ ಉಚಿತ ವಿವಾಹ ಕಾರ್ಯಕ್ರಮ ಹಮ್ಮಿಕೊಂಡಿದೆ ಹಾಗಾಗಿ ಸಗರ ನಾಡಿನ ಜನತೆಯು ಈ ಕಾರ್ಯಕ್ರಮದಲ್ಲಿ ತಮ್ಮ ಮಕ್ಕಳಿಗೆ ಮದುವೆ ಮಾಡುಲು ಇಚ್ಚಿಸುವವರು ಸಂಘಟನೆಯ ಸಂಸ್ಥಾಪಕ ಅಧ್ಯಕ್ಷರಾದ ಮೌನೇಶ ಹಳಿಸಗರ ಅವರನ್ನು ಸಂಪರ್ಕಿಸಬಹುದಾಗಿದೆ ತಿಳಿಸಿದ್ದಾರೆ. ಮೌನೇಶ ಹಳಿಸಗರ ಸಂಪರ್ಕಿಸುವ ಕರೆ ಸಂಖ್ಯೆ. 9731520852 -9741142898 *

ಸುದ್ದಿ ಮತ್ತು ಜಾಹಿರಾತುಗಳಿಗಾಗಿ ಸಂಪರ್ಕಿಸಿ : +91 99809 19019
error: Content is protected !!