*6.55 ಕೋಟಿ ಮೌಲ್ಯದ ಅಕ್ರಮ ಒತ್ತುವರಿ ತೆರವು : ಜಿಲ್ಲಾಧಿಕಾರಿ ಜಿ.ಜಗದೀಶ*
*ಬೆಂಗಳೂರು ನಗರ ಜಿಲ್ಲೆ, ಜುಲೈ 19 (ಕರ್ನಾಟಕ ವಾರ್ತೆ):* ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಒತ್ತುವರಿಯಾಗಿರುವ ರೂ. 6.55 ಕೋಟಿ ಅಂದಾಜು ಮೌಲ್ಯದ ಒಟ್ಟು ಎಕರೆ 3 ಎಕರೆ 0.09 ಗುಂಟೆ ಸರ್ಕಾರಿ ಜಮೀನನ್ನು ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ಜಿ.ಜಗದೀಶ ಅವರ ನೇತೃತ್ವದಲ್ಲಿ ತೆರವುಗೊಳಿಸಿ ಸರ್ಕಾರದ ವಶಕ್ಕೆ ಪಡೆಯಲಾಯಿತು.
ಇಂದು ಬೆಂಗಳೂರು ನಗರ ಜಿಲ್ಲೆಯಾದ್ಯಂತ ವಿವಿಧ ತಾಲ್ಲೂಕುಗಳ ತಹಶೀಲ್ದಾರ್ ಗಳು ತಮ್ಮ ವ್ಯಾಪ್ತಿಯಲ್ಲಿ ಅಕ್ರಮವಾಗಿ ಒತ್ತುವರಿಯಾಗಿದ್ದ ಗುಂಡುತೋಪು, ಸ್ಮಶಾನ, ಗೋಮಾಳ, ರಾಜಕಾಲುವೆ ಮತ್ತು ನಕಾಶೆ ದಾರಿ ಜಾಗಗಳಿಗೆ ಭೇಟಿ ನೀಡಿ ತೆರವು ಕಾರ್ಯಾಚರಣೆ ಕೈಗೊಂಡರು.
*ಬೆಂಗಳೂರು ಪೂರ್ವ ತಾಲ್ಲೂಕಿನ* ಬಿದರಹಳ್ಳಿ ಹೋಬಳಿಯ ಕಮ್ಮಸಂದ್ರ ಗ್ರಾಮದ ಸ.ನಂ. 11ರ ಗುಂಡುತೋಪು ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 0.02 ಗುಂಟೆಗಳಾಗಿದ್ದು, ಅಂದಾಜು ಮೌಲ್ಯ 0.40 ಲಕ್ಷಗಳಾಗಿರುತ್ತದೆ. ವರ್ತೂರು ಹೋಬಳಿಯ ಗುಂಜೂರು ಗ್ರಾಮದ ಸ.ನಂ.6 ರ ಸ್ಮಶಾನ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 0.06 ಗುಂಟೆಗಳಾಗಿದ್ದು, ಅಂದಾಜು ಮೌಲ್ಯ 1.80 ಕೋಟಿಗಳಾಗಿರುತ್ತದೆ.
*ಆನೇಕಲ್ ತಾಲ್ಲೂಕಿನ* ಅತ್ತಿಬೆಲೆ-1 ಹೋಬಳಿಯ ಅತ್ತಿಬೆಲೆ ಗ್ರಾಮದ ಸ.ನಂ. 124 ರ ಸ್ಮಶಾನ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 0.02 ಗುಂಟೆಗಳಾಗಿದ್ದು, ಅಂದಾಜು ಮೌಲ್ಯ 0.10 ಲಕ್ಷಗಳಾಗಿರುತ್ತದೆ.
*ಬೆಂಗಳೂರು ದಕ್ಷಿಣ ತಾಲ್ಲೂಕಿನ* ತಾವರೆಕೆರೆ ಹೋಬಳಿಯ ಬ್ಯಾಲಾಳು ಗ್ರಾಮದ ಸ.ನಂ 50 ರ ಗೋಮಾಳ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 0.12 ಗುಂಟೆಗಳಾಗಿದ್ದು ಅಂದಾಜು ಮೌಲ್ಯ ರೂ 0.80 ಲಕ್ಷಗಳಾಗಿರುತ್ತದೆ. ಕೆಂಗೇರಿ ಹೋಬಳಿಯ ಕುಂಬಳಗೋಡು ಗ್ರಾಮದ ಸ.ನಂ 81 ರ ರಾಜಕಾಲುವೆ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 0.10 ಗುಂಟೆಗಳಾಗಿದ್ದು ಅಂದಾಜು ಮೌಲ್ಯ ರೂ 0.25 ಲಕ್ಷಗಳಾಗಿರುತ್ತದೆ
*ಬೆಂಗಳೂರು ಉತ್ತರ ತಾಲ್ಲೂಕಿನ* ದಾಸನಪುರ ಹೋಬಳಿಯ ಶಿವನಪುರ ಗ್ರಾಮದ ಸ.ನಂ 35ರ ಗುಂಡುತೋಪು ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 0.10 ಗುಂಟೆಗಳಾಗಿದ್ದು ಅಂದಾಜು ಮೌಲ್ಯ ರೂ 0.60 ಲಕ್ಷಗಳಾಗಿರುತ್ತದೆ.
*ಯಲಹಂಕ ತಾಲ್ಲೂಕಿನ* ಹೆಸರಘಟ್ಟ-2 ಹೋಬಳಿಯ ಬ್ಯಾತ ಮತ್ತು ಸೀರೇಸಂದ್ರ ಗ್ರಾಮದ ನಕಾಶೆ ದಾರಿ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 2 ಎಕರೆ 0.07 ಗುಂಟೆಗಳಾಗಿದ್ದು, ಅಂದಾಜು ಮೌಲ್ಯ ರೂ 2.60 ಕೋಟಿಗಳಾಗಿರುತ್ತದೆ
ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯ ಸಹಾಯಕರು ಮತ್ತು ವಿವಿಧ ತಾಲ್ಲೂಕಿನ ತಹಶೀಲ್ದಾರ್ ರವರು ಉಪಸ್ಥಿತರಿದ್ದರು.