ಪತ್ರಿಕಾ, ಮಧ್ಯಮ ಕ್ಷೇತ್ರದ ಸೇವೆಗಾಗಿ ” ವಿಶೇಷ ಜೀವಮಾನ ಸಾಧನೆ ಪ್ರಶಸ್ತಿ ” ಪಡೆದ ರಾಯಚೂರಿನ ಭೀಮರಾಯ ಹದ್ದಿನಾಳ್

ದಾವಣಗೆರೆ : ಸರಳ ಜೀವಿಗಳು,ಯುವಕರ ಕಣ್ಮಣಿಗಳು,ಪತ್ರಿಕಾ ರಂಗದ ಧ್ರುವತಾರೆ, ಶ್ರೀ ಮಹರ್ಷಿ ವಾಲ್ಮೀಕಿ ನಾಯಕ ರತ್ನ ಪ್ರಶಸ್ತಿ ಪುರಸ್ಕೃತರು, ಸದಾ ಹಸನ್ಮುಖಿಗಳು, ಪ್ರತಿಯೊಬ್ಬರ ಕಷ್ಟಕ್ಕೆ ಸ್ಪಂದಿಸುವ ಗುಣನಡತೆವುಳ್ಳವರು,ಎಲ್ಲರಿಗೂ ಒಳ್ಳೆಯದನ್ನೇ ಬಯಸುವ ಸರಳ ಸಜ್ಜನಿಕೆಯ ಸಹಕಾರ ಮೂರ್ತಿಯಾಗಿರುವ ರಾಯಚೂರಿನ ಕಂಪಿಲವಾಣಿ ಪ್ರಾದೇಶಿಕ ಕನ್ನಡ ದಿನಪತ್ರಿಕೆಯ ಸಂಪಾದಕರಾದ ಭೀಮರಾಯ ಹದ್ದಿನಾಳ್ ಅವರಿಗೆ ರಾಯಚೂರು ಜಿಲ್ಲೆಯ ಲಿಂಗಸಗೂರು ಪಟ್ಟಣದಲ್ಲಿ ಕರ್ನಾಟಕದ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಜುಲೈ 27 ರ ಭಾನುವಾರದಂದು ಏರ್ಪಡಿಸಿದ್ದ ” ಪತ್ರಿಕಾ ದಿನಾಚರಣೆ ” ಸಮಾರಂಭದಲ್ಲಿ ” ವಿಶೇಷ ಜೀವಮಾನ ಸಾಧನೆ” ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.

ಪತ್ರಿಕೆ ಮಾಧ್ಯಮ ಕ್ಷೇತ್ರದಲ್ಲಿ 33 ವರ್ಷಗಳ ಕಾಲ ಸುದೀರ್ಘವಾಗಿ ಸೇವೆಯನ್ನು ಸಲ್ಲಿಸಿರುವ ಇವರು
“ವಿಶೇಷ ಜೀವಮಾನ ಸಾಧನೆ ಪ್ರಶಸ್ತಿ” ಯನ್ನು ಸ್ವೀಕರಿಸಿದ್ದು ನಮಗೆಲ್ಲರಿಗೂ ಸಂತಸ ತಂದಿದೆ ಎಂದು ತಿಳಿಸಿರುವ ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ ಸಂಘದ ರಾಜ್ಯಾಧ್ಯಕ್ಷರಾದ ಎ.ಸಿ. ತಿಪ್ಪೇಸ್ವಾಮಿ ಅವರು ಭೀಮರಾಯ ಹದ್ಧಿನಾಳ ಅವರಿಗೆ ತುಂಬು ಹೃದಯದ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
ಪ್ರಶಸ್ತಿ ಪುರಸ್ಕೃತರಾದ ಭೀಮರಾಯ ಹದ್ದಿನಾಳ್ ಅವರು ನಮ್ಮ ಸಂಘದ ರಾಜ್ಯ ಉಪಾಧ್ಯಕ್ಷರಾಗಿರುವುದು ನಮಗೆಲ್ಲ ಹೆಮ್ಮಪಡುವಂತಹದ್ದು ಎಂದು ಸಂತೋಷ ವ್ಯಕ್ತಪಡಿಸಿದ್ದಾರೆ.

Leave a Reply

Your email address will not be published. Required fields are marked *

You missed

*ಬಡ ಕಾರ್ಮಿಕ ಮಕ್ಕಳ ಹಿತಕ್ಕಾಗಿ ಉಚಿತ ವಿವಾಹ ನೋಂದಣಿ -ಮೌನೇಶ ಹಳಿಸಗರ* ಕಲ್ಯಾಣ ಕರ್ನಾಟಕ ಕಾರ್ಮಿಕ ಹಿತ ರಕ್ಷಣಾ ಸಂಘಟನೆಯಿಂದ ಕಲ್ಯಾಣ ಕರ್ನಾಟಕ ಭಾಗದಲ್ಲಿ ಸತತವಾಗಿ ಕಳೆದ 3 ವರ್ಷಗಳಿಂದ ಕಾರ್ಮಿಕರ ಹಿತಕ್ಕಾಗಿ ಕಾರ್ಮಿಕರ ಹೇಳ್ಗೆಗಾಗಿ ಮತ್ತು ನಾಡು ನುಡಿ ಜಲಕ್ಕಾಗಿ ಶ್ರಮಿಸುತ್ತಾ ಬಂದಿದೆ. ಈಗ ಮೂರನೇ ವರ್ಷ ಮುಕ್ತಾಯಗೊಂಡು 4ನೇ ವರ್ಷಕ್ಕೆ ಪಾದರ್ಪಣೆ ಯಾಗುತ್ತಿರುವ ಹಿನ್ನೆಲೆಯಲ್ಲಿ ಬರುವ ಫೆಬ್ರವರಿ 8ರಂದು ಶಹಾಪುರ ನಗರದ ಹಳಿಸಗರದಲ್ಲಿ ಉಚಿತ ಸಾಮೂಹಿಕ ವಿವಾಹ ಸಮಾರಂಭ ಹಮ್ಮಿಕೊಂಡಿದ್ದು ಈ ಕಾರ್ಯಕ್ರಮಕ್ಕೆ ನಾಡಿನ ಹರ,ಗುರು ಚರಮೂರ್ತಿಗಳು ಹಾಗೂ ರಾಜಕೀಯ ಗಣ್ಯರು, ವಿವಿಧ ಸಂಘಟನೆಯ ಮುಖಂಡರು ಭಾಗವಹಿಸಲಿದ್ದಾರೆ. ಪ್ರತಿ ವರ್ಷದಂತೆ ಈ ವರ್ಷವು ಶಹಾಪೂರ ನಗರ ಹಳಿಸಗರ ಗ್ರಾಮದಲ್ಲಿ ಕಲ್ಯಾಣ ಕರ್ನಾಟಕ ಕಾರ್ಮಿಕ ಹಿತ ರಕ್ಷಣಾ ಸಂಘವು ಬಡವರ ಮಕ್ಕಳ ಹಿತಕ್ಕಾಗಿ ಈ ಸಂಘಟನೆಯ ಉಚಿತ ವಿವಾಹ ಕಾರ್ಯಕ್ರಮ ಹಮ್ಮಿಕೊಂಡಿದೆ ಹಾಗಾಗಿ ಸಗರ ನಾಡಿನ ಜನತೆಯು ಈ ಕಾರ್ಯಕ್ರಮದಲ್ಲಿ ತಮ್ಮ ಮಕ್ಕಳಿಗೆ ಮದುವೆ ಮಾಡುಲು ಇಚ್ಚಿಸುವವರು ಸಂಘಟನೆಯ ಸಂಸ್ಥಾಪಕ ಅಧ್ಯಕ್ಷರಾದ ಮೌನೇಶ ಹಳಿಸಗರ ಅವರನ್ನು ಸಂಪರ್ಕಿಸಬಹುದಾಗಿದೆ ತಿಳಿಸಿದ್ದಾರೆ. ಮೌನೇಶ ಹಳಿಸಗರ ಸಂಪರ್ಕಿಸುವ ಕರೆ ಸಂಖ್ಯೆ. 9731520852 -9741142898 *

ಸುದ್ದಿ ಮತ್ತು ಜಾಹಿರಾತುಗಳಿಗಾಗಿ ಸಂಪರ್ಕಿಸಿ : +91 99809 19019
error: Content is protected !!