*ಧರ್ಮಸ್ಥಳದ ಅಪಪ್ರಚಾರ ಖಂಡಿಸಿ ಬೃಹತ್ ಪ್ರತಿಭಟನೆ*

ವಿಜಯನಗರ ಜಿಲ್ಲೆ : (ಹೊಸಪೇಟೆ) : ಬಿಜೆಪಿ ಮಂಡಲ ವತಿಯಿಂದ ಇಂದು *ಮಂಡಲ ಅಧ್ಯಕ್ಷ ಶಂಕರ್ ಮೇಟಿ* ಅವರ ಅಧ್ಯಕ್ಷತೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಹೆಸರಿಗೆ ಅಪ ಪ್ರಚಾರವನ್ನು ಪುಷ್ಕರ್ಮಿ ಗಳ ಕೃತ್ಯಗಳನ್ನು ಖಂಡಿಸಿ, ಧರ್ಮದ ಉಳಿವಿಗಾಗಿ
ನೂರಾರು ಭಾರತೀಯ ಜನತಾ ಪಕ್ಷದ ಪದಾಧಿಕಾರಿಗಳು, ಧರ್ಮಸ್ಥಳದ ಅಭಿಮಾನಿಗಳು, ಮಂಜುನಾಥ ಸ್ವಾಮಿಯ ಭಕ್ತರು, ಅಗಾಧ ಸಂಖ್ಯೆಯಲ್ಲಿ ಸೇರಿ ಬೃಹತ್ ಪ್ರತಿಭಟನೆ ನಡಿಯಿತು. ಹೊಸಪೇಟೆ ಪಾಟೇಲ್ ನಗರದ ಶ್ರೀ ವೇಣುಗೋಪಾಲಸ್ವಾಮಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ತದನಂತರ ಪಾದಯಾತ್ರೆ ಮೂಲಕ ಸಾಗಿಬಂದು ಡಾ.ಬಾಬಾಸಾಹೇಬ ಅಂಬೇಡ್ಕರ್ ಸರ್ಕಲ್ ನಲ್ಲಿ ಬೃಹತ್ ಪ್ರತಿಭಟನೆ ಮಾಡಿ, ನಂತರ ಪಾದಯಾತ್ರೆ ಮೂಲಕ ತೆರಳಿ ಮಾನ್ಯ ತಹಸಿಲ್ದಾರ್ ಅವರಿಗೆ ಮನವಿ ಪತ್ರ ವನ್ನು ನೀಡಿ. ಧರ್ಮಸ್ಥಳದ ಪವಿತ್ರತೆಯನ್ನು ದೂರುದ್ಧೇಶಪೂರ್ವಕವಾಗಿ ಹಾಳು ಮಾಡುತ್ತಿರುವ ದುಷ್ಕರ್ಮಿಗಳ ಕೃತ್ಯವನ್ನು ಖಂಡಿಸಿ , ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಿ, ಘೋಷಣೆಯನ್ನು ಕೂಗುತ್ತಾ, ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿ ,
ಪ್ರತಿಭಟನೆಯಲ್ಲಿ ,,, ಅಯ್ಯಳ್ಳಿತಿಮ್ಮಪ್ಪ , ಅಶೋಕ್ ಜೀರೇ , ಕೆ.ಎಸ್.ರಾಘವೆಂದ್ರ , ಕಿಚಡಿ ಕೊಟ್ರೇಶ್, ಜಗದೀಶ್ ಕಮಿಟಿಗಿ, ಉಪಾಧ್ಯಕ್ಷರಾದ ಎ.ಎಂ. ಬಸವರಾಜ, ರೇವಣ್ಣಸಿದ್ಧಪ್ಪ, ನಗರಸಭೆ ಅಧ್ಯಕ್ಷರಾದ ರೂಪೇಶ್ ಕುಮಾರ್, ಉಪಾಧ್ಯಕ್ಷರಾದ ರಮೇಶ್ ಗುಪ್ತಾ,ಮಂಡಲ ಪ್ರಧಾನ ಕಾರ್ಯದರ್ಶಿಯಾದ ಮಧುರಚನ್ನ ಶಾಸ್ತ್ರಿ,ಹೆಚ್ ನಟರಾಜ್, ಮತ್ತು ,ರಾಜ್ಯ ಜಿಲ್ಲಾ ಮತ್ತು ಹೊಸಪೇಟೆ ಮಂಡಲ ವಿವಿಧ ಮೋರ್ಚಾ ನಗರ ಮಹಾಶಕ್ತಿ ಕೇಂದ್ರ ಮಹಾಶಕ್ತಿಕೇಂದ್ರ ಶಕ್ತಿಕೇಂದ್ರ , ಪ್ರಕೋಷ್ಠಗಳು ,ಮಹಿಳಾ ಕಾರ್ಯಕರ್ತರು ಬಿಜೆಪಿ ಮುಖಂಡರು ,ಚುನಾಯಿತ ಜನಪ್ರತಿನಿಧಿಗಳು ವಿವಿಧ ಎಲ್ಲಾ ಸಂಘಸಂಸ್ಥೆಗಳು ಮತ್ತು, ಶ್ರೀ ಕ್ಷೇತ್ರ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸಂಘದ ಮಹಿಳೆ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

Leave a Reply

Your email address will not be published. Required fields are marked *

You missed

*ಬಡ ಕಾರ್ಮಿಕ ಮಕ್ಕಳ ಹಿತಕ್ಕಾಗಿ ಉಚಿತ ವಿವಾಹ ನೋಂದಣಿ -ಮೌನೇಶ ಹಳಿಸಗರ* ಕಲ್ಯಾಣ ಕರ್ನಾಟಕ ಕಾರ್ಮಿಕ ಹಿತ ರಕ್ಷಣಾ ಸಂಘಟನೆಯಿಂದ ಕಲ್ಯಾಣ ಕರ್ನಾಟಕ ಭಾಗದಲ್ಲಿ ಸತತವಾಗಿ ಕಳೆದ 3 ವರ್ಷಗಳಿಂದ ಕಾರ್ಮಿಕರ ಹಿತಕ್ಕಾಗಿ ಕಾರ್ಮಿಕರ ಹೇಳ್ಗೆಗಾಗಿ ಮತ್ತು ನಾಡು ನುಡಿ ಜಲಕ್ಕಾಗಿ ಶ್ರಮಿಸುತ್ತಾ ಬಂದಿದೆ. ಈಗ ಮೂರನೇ ವರ್ಷ ಮುಕ್ತಾಯಗೊಂಡು 4ನೇ ವರ್ಷಕ್ಕೆ ಪಾದರ್ಪಣೆ ಯಾಗುತ್ತಿರುವ ಹಿನ್ನೆಲೆಯಲ್ಲಿ ಬರುವ ಫೆಬ್ರವರಿ 8ರಂದು ಶಹಾಪುರ ನಗರದ ಹಳಿಸಗರದಲ್ಲಿ ಉಚಿತ ಸಾಮೂಹಿಕ ವಿವಾಹ ಸಮಾರಂಭ ಹಮ್ಮಿಕೊಂಡಿದ್ದು ಈ ಕಾರ್ಯಕ್ರಮಕ್ಕೆ ನಾಡಿನ ಹರ,ಗುರು ಚರಮೂರ್ತಿಗಳು ಹಾಗೂ ರಾಜಕೀಯ ಗಣ್ಯರು, ವಿವಿಧ ಸಂಘಟನೆಯ ಮುಖಂಡರು ಭಾಗವಹಿಸಲಿದ್ದಾರೆ. ಪ್ರತಿ ವರ್ಷದಂತೆ ಈ ವರ್ಷವು ಶಹಾಪೂರ ನಗರ ಹಳಿಸಗರ ಗ್ರಾಮದಲ್ಲಿ ಕಲ್ಯಾಣ ಕರ್ನಾಟಕ ಕಾರ್ಮಿಕ ಹಿತ ರಕ್ಷಣಾ ಸಂಘವು ಬಡವರ ಮಕ್ಕಳ ಹಿತಕ್ಕಾಗಿ ಈ ಸಂಘಟನೆಯ ಉಚಿತ ವಿವಾಹ ಕಾರ್ಯಕ್ರಮ ಹಮ್ಮಿಕೊಂಡಿದೆ ಹಾಗಾಗಿ ಸಗರ ನಾಡಿನ ಜನತೆಯು ಈ ಕಾರ್ಯಕ್ರಮದಲ್ಲಿ ತಮ್ಮ ಮಕ್ಕಳಿಗೆ ಮದುವೆ ಮಾಡುಲು ಇಚ್ಚಿಸುವವರು ಸಂಘಟನೆಯ ಸಂಸ್ಥಾಪಕ ಅಧ್ಯಕ್ಷರಾದ ಮೌನೇಶ ಹಳಿಸಗರ ಅವರನ್ನು ಸಂಪರ್ಕಿಸಬಹುದಾಗಿದೆ ತಿಳಿಸಿದ್ದಾರೆ. ಮೌನೇಶ ಹಳಿಸಗರ ಸಂಪರ್ಕಿಸುವ ಕರೆ ಸಂಖ್ಯೆ. 9731520852 -9741142898 *

ಸುದ್ದಿ ಮತ್ತು ಜಾಹಿರಾತುಗಳಿಗಾಗಿ ಸಂಪರ್ಕಿಸಿ : +91 99809 19019
error: Content is protected !!