ತಂಬೂರ-ಮುಕ್ಕಲ ಗ್ರಾಮ ಪಂಚಾಯತ ಪಿಡಿಓ ನಾಗರಾಜಕುಮಾರ ಎಸ್. ಬಿದರಳ್ಳಿ ಅಮಾನತ್ತುಗೊಳಿಸಿ, ಜಿಲ್ಲಾ ಪಂಚಾಯತ ಸಿಇಓ ಆದೇಶ

ಧಾರವಾಡ (ಕರ್ನಾಟಕ ವಾರ್ತೆ) ಸೆ.08: ಕಲಘಟಗಿ ತಾಲೂಕಿನ ತಂಬೂರು ಗ್ರಾಮಪಂಚಾಯತ ಹಾಗೂ ಹೆಚ್ಚುವರಿ ಪ್ರಭಾರ ಮುಕ್ಕಲ ಗ್ರಾಮ ಪಂಚಾಯಿತಿಯ ಪಂಚಾಯತ ಅಭಿವೃದ್ಧಿ ಅಧಿಕಾರಿ ಆಗಿರುವ ನಾಗರಾಜಕುಮಾರ ಎಸ್. ಬಿದರಳ್ಳಿ ಅವರನ್ನು ಕರ್ತವ್ಯಲೋಪ ಹಾಗೂ ಹಣಕಾಸು ದುರಪಯೋಗ ಆಪದಾನೆಗಾಗಿ ಮೇರೆಗೆ ಧಾರವಾಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ ಅವರು ಅಮಾನತ್ತುಗೊಳಿಸಿ, ಸೆಪ್ಟೆಂಬರ 6 ರಂದು ಆದೇಶ ಹೊರಡಿಸಿದ್ದಾರೆ.

ಪಂಚಾಯತ ಅಭಿವೃದ್ಧಿ ಅಧಿಕಾರಿ ನಾಗರಾಜಕುಮಾರ ಬಿದರಳ್ಳಿ ಅವರು ತಂಬೂರ ಹಾಗೂ ಮುಕ್ಕಲ ಗ್ರಾಮಪಂಚಾಯತಗಳಲ್ಲಿ ಎಸ್ಕೋ ಬ್ಯಾಂಕ್ ಖಾತೆಯಿಂದ ಖಾಸಗಿ ವ್ಯಕ್ತಿಗಳಿಗೆ ಹಣ ಸಂದಾಯ ಮಾಡಿರುವುದು ಕಂಡುಬಂದಿದೆ. ಮತ್ತು ತಂಬೂರ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ 2024-25 ನೇ ಸಾಲಿನಲ್ಲಿ ರೂ. 5,10,000 ಮತ್ತು 2025-26 ನೇ ಸಾಲಿನಲ್ಲಿ ರೂ. 2,28,000 ಹಾಗೂ ಹೆಚ್ಚುವರಿ ಪ್ರಭಾರ ವಹಿಸಿಕೊಂಡಿರುವ ಮುಕ್ಕಲ ಗ್ರಾಮಪಂಚಾಯತಿಯಲ್ಲಿ 2024-25 ನೇ ಸಾಲಿನಲ್ಲಿ ರೂ. 4,20,000 ಮತ್ತು 2025-26 ನೇ ಸಾಲಿನಲ್ಲಿ ರೂ. 1,30,000 ಮೊತ್ತವನ್ನು ಎಸ್ಕೋ ಬ್ಯಾಂಕ್ ಖಾತೆಯಿಂದ ಖಾಸಗಿ ವ್ಯಕ್ತಿಗಳಿಗೆ ಹಣ ಸಂದಾಯ ಮಾಡಿ, ಸರ್ಕಾರ ನಿಯಮಗಳನ್ನು ಮತ್ತು ಇಲಾಖಾ ಮಾರ್ಗಸೂಚಿಗಳನ್ನು ಉಲ್ಲಂಘಿಸಿ, ಕರ್ತವ್ಯ ಲೋಪ ಮಾಡಿ ಹಣಕಾಸಿನ ದುರಪಯೋಗ ಪಡಿಸಿಕೊಂಡಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಗ್ರಾಮ ಪಂಚಾಯತಿಯ ಎಸ್ಕೋ ಖಾತೆಗಳಲ್ಲಿ ಉಳಿದಿರುವ ಅನುದಾನವನ್ನು ಕಡ್ಡಾಯವಾಗಿ ಹೆಸ್ಕಾಂ ಕಂಪನಿಗಳಿಗೆ ಪಾವತಿಸುವುದು ಹಾಗೂ ಶಾಸನಬದ್ಧ ಅನುದಾನದಡಿ ಗ್ರಾಮ ಪಂಚಾಯತಿಯ ಎಸ್ಕೋ ಖಾತೆಗಳಿಗೆ ಬಿಡುಗಡೆಯಾಗಿರುವ ಅನುದಾನವನ್ನು ಕಡ್ಡಾಯವಾಗಿ ಹಿಂದಿನ ವರ್ಷಗಳಿಗೆ ಬಾಕಿ ಇರುವ ವಿದ್ಯುಚ್ಛಕ್ತಿ ಬಿಲ್‍ನ್ನು ಪ್ರತಿ ಆರ್.ಆರ್. ಸಂಖ್ಯೆ ಅನುಸಾರ ಹೊಂದಾಣಿಕೆ ಮಾಡಿಕೊಳ್ಳದಿದ್ದರೂ ಸಹ ಮುಂಗಡವಾಗಿ ಹೆಸ್ಕಾಂ ಕಂಪನಿಗಳಿಗೆ ಪಾವತಿಸಲು ಸೂಚಿಸಲಾಗಿದ್ದರೂ ಸಹ ಸರ್ಕಾರದ ನಿಯಮಗಳನ್ನು ಪಾಲಿಸಿದೆ ಇಲಾಖಾ ಮಾರ್ಗಸೂಚಿ ಉಲ್ಲಂಘಿಸಿ, ಕರ್ತವ್ಯ ಲೋಪ ಮಾಡಿದ್ದಾರೆ.

ಆದ್ದರಿಂದ ಕರ್ನಾಟಕ ನಾಗರೀಕ ಸೇವಾ ನಿಯಮಗಳು (ವರ್ಗಿಕರಣ ನಿಯಂತ್ರಣ ಮತ್ತು ಅಪೀಲು) 1957 ರ ನಿಯಮ 10 (1) ಡ ಪ್ರಕಾರ ಗ್ರಾಮಪಂಚಾಯತ ಪಿಡಿಓ ನಾಗರಾಜಕುಮಾರ ಎಸ್. ಬಿದರಳ್ಳಿ ಅವರನ್ನು ಇಲಾಖಾ ವಿಚಾರಣೆ ಕಾಯ್ದಿರಿಸಿ, ಅಮಾನತ್ತುಗೋಳಿಸಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ ಅವರು ಆದೇಶ ಹೊರಡಿಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

**

Leave a Reply

Your email address will not be published. Required fields are marked *

You missed

*ಬಡ ಕಾರ್ಮಿಕ ಮಕ್ಕಳ ಹಿತಕ್ಕಾಗಿ ಉಚಿತ ವಿವಾಹ ನೋಂದಣಿ -ಮೌನೇಶ ಹಳಿಸಗರ* ಕಲ್ಯಾಣ ಕರ್ನಾಟಕ ಕಾರ್ಮಿಕ ಹಿತ ರಕ್ಷಣಾ ಸಂಘಟನೆಯಿಂದ ಕಲ್ಯಾಣ ಕರ್ನಾಟಕ ಭಾಗದಲ್ಲಿ ಸತತವಾಗಿ ಕಳೆದ 3 ವರ್ಷಗಳಿಂದ ಕಾರ್ಮಿಕರ ಹಿತಕ್ಕಾಗಿ ಕಾರ್ಮಿಕರ ಹೇಳ್ಗೆಗಾಗಿ ಮತ್ತು ನಾಡು ನುಡಿ ಜಲಕ್ಕಾಗಿ ಶ್ರಮಿಸುತ್ತಾ ಬಂದಿದೆ. ಈಗ ಮೂರನೇ ವರ್ಷ ಮುಕ್ತಾಯಗೊಂಡು 4ನೇ ವರ್ಷಕ್ಕೆ ಪಾದರ್ಪಣೆ ಯಾಗುತ್ತಿರುವ ಹಿನ್ನೆಲೆಯಲ್ಲಿ ಬರುವ ಫೆಬ್ರವರಿ 8ರಂದು ಶಹಾಪುರ ನಗರದ ಹಳಿಸಗರದಲ್ಲಿ ಉಚಿತ ಸಾಮೂಹಿಕ ವಿವಾಹ ಸಮಾರಂಭ ಹಮ್ಮಿಕೊಂಡಿದ್ದು ಈ ಕಾರ್ಯಕ್ರಮಕ್ಕೆ ನಾಡಿನ ಹರ,ಗುರು ಚರಮೂರ್ತಿಗಳು ಹಾಗೂ ರಾಜಕೀಯ ಗಣ್ಯರು, ವಿವಿಧ ಸಂಘಟನೆಯ ಮುಖಂಡರು ಭಾಗವಹಿಸಲಿದ್ದಾರೆ. ಪ್ರತಿ ವರ್ಷದಂತೆ ಈ ವರ್ಷವು ಶಹಾಪೂರ ನಗರ ಹಳಿಸಗರ ಗ್ರಾಮದಲ್ಲಿ ಕಲ್ಯಾಣ ಕರ್ನಾಟಕ ಕಾರ್ಮಿಕ ಹಿತ ರಕ್ಷಣಾ ಸಂಘವು ಬಡವರ ಮಕ್ಕಳ ಹಿತಕ್ಕಾಗಿ ಈ ಸಂಘಟನೆಯ ಉಚಿತ ವಿವಾಹ ಕಾರ್ಯಕ್ರಮ ಹಮ್ಮಿಕೊಂಡಿದೆ ಹಾಗಾಗಿ ಸಗರ ನಾಡಿನ ಜನತೆಯು ಈ ಕಾರ್ಯಕ್ರಮದಲ್ಲಿ ತಮ್ಮ ಮಕ್ಕಳಿಗೆ ಮದುವೆ ಮಾಡುಲು ಇಚ್ಚಿಸುವವರು ಸಂಘಟನೆಯ ಸಂಸ್ಥಾಪಕ ಅಧ್ಯಕ್ಷರಾದ ಮೌನೇಶ ಹಳಿಸಗರ ಅವರನ್ನು ಸಂಪರ್ಕಿಸಬಹುದಾಗಿದೆ ತಿಳಿಸಿದ್ದಾರೆ. ಮೌನೇಶ ಹಳಿಸಗರ ಸಂಪರ್ಕಿಸುವ ಕರೆ ಸಂಖ್ಯೆ. 9731520852 -9741142898 *

ಸುದ್ದಿ ಮತ್ತು ಜಾಹಿರಾತುಗಳಿಗಾಗಿ ಸಂಪರ್ಕಿಸಿ : +91 99809 19019
error: Content is protected !!