ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ: ವದಂತಿಗಳಿಗೆ ಕಿವಿ ಕೊಡಬೇಡಿ – ಡಿಸಿ ಜಿ ಜಗದೀಶ
ಬೆಂಗಳೂರಿನ ನಗರ ಜಿಲ್ಲೆ (ಕರ್ನಾಟಕ ವಾರ್ತೆ) ಸೆ 29:
ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಸಮರ್ಪಕವಾಗಿ ಕೈಗೊಳ್ಳಲಾಗುತ್ತಿದ್ದು, ಕೆಲವು ಸಾರ್ವಜನಿಕರು ಗಣತಿದಾರರು ತಮ್ಮ ಪಡಿತರ ಚೀಟಿಯ ರದ್ದತಿಗೆ ಬಂದಿದ್ದಾರೆಂಬ ತಪ್ಪು ಕಲ್ಪನೆಯಿಂದ ಸರಿಯಾದ ಮಾಹಿತಿ ನೀಡಲು ಸಹಕರಿಸದೆ ಸಮೀಕ್ಷೆಗೆ ಅಡ್ಡಿಯಾಗುತ್ತಿರುವುದು ಕಂಡುಬಂದಿರುತ್ತದೆ.

ಈ ಸಮೀಕ್ಷೆಯು ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾಗಿದ್ದು, ಹಿಂದುಳಿದ ವರ್ಗಗಳ ಹಾಗೂ ಇತರೆ ಎಲ್ಲ ಜನರ ಸಾಮಾಜಿಕ ಮತ್ತು ಶೈಕ್ಷಣಿಕ ದತ್ತಾಂಶವನ್ನು ಸಂಗ್ರಹಿಸಲು ಮಾತ್ರ ನಡೆಸಲಾಗುತ್ತಿದೆ.
ಯಾವುದೇ ಪಡಿತರ ಚೀಟಿ ರದ್ದತಿ ಕಾರ್ಯವನ್ನು ಸಮೀಕ್ಷೆಯಲ್ಲಿ ಮಾಡಲಾಗುವುದಿಲ್ಲ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ಜಿ ಜಗದೀಶ ಅವರು ಸ್ಪಷ್ಟಪಡಿಸಿದ್ದಾರೆ.

ರಾಜ್ಯಾದ್ಯಂತ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಅಸಮಾನತೆಗಳನ್ನು ಹೋಗಲಾಡಿಸುವ ಯೋಜನೆಗಳನ್ನು ರೂಪಿಸಲು ಈ ದತ್ತಾಂಶ ಸಹಕಾರಿಯಾಗಲಿದೆ.

ಹಾಗಾಗಿ ಸಾರ್ವಜನಿಕರು ಈ ಸಮೀಕ್ಷೆ ಬಗ್ಗೆ ಯಾವುದೇ ತಪ್ಪು ಕಲ್ಪನೆ ಹೊಂದದೆ ಮತ್ತು ವದಂತಿಗಳಿಗೆ ಕಿವಿಕೊಡದೇ ನಿಶ್ಚಿಂತೆಯಿಂದ ಭಾಗವಹಿಸಿ ಸಮೀಕ್ಷೆಯನ್ನು ಯಶಸ್ವಿಗೊಳಿಸಲು ಸಹಕರಿಸಬೇಕೆಂದು ಜಿಲ್ಲಾಧಿಕಾರಿಗಳು ಮನವಿ ಮಾಡಿದ್ದಾರೆ.

Leave a Reply

Your email address will not be published. Required fields are marked *

You missed

*ಬಡ ಕಾರ್ಮಿಕ ಮಕ್ಕಳ ಹಿತಕ್ಕಾಗಿ ಉಚಿತ ವಿವಾಹ ನೋಂದಣಿ -ಮೌನೇಶ ಹಳಿಸಗರ* ಕಲ್ಯಾಣ ಕರ್ನಾಟಕ ಕಾರ್ಮಿಕ ಹಿತ ರಕ್ಷಣಾ ಸಂಘಟನೆಯಿಂದ ಕಲ್ಯಾಣ ಕರ್ನಾಟಕ ಭಾಗದಲ್ಲಿ ಸತತವಾಗಿ ಕಳೆದ 3 ವರ್ಷಗಳಿಂದ ಕಾರ್ಮಿಕರ ಹಿತಕ್ಕಾಗಿ ಕಾರ್ಮಿಕರ ಹೇಳ್ಗೆಗಾಗಿ ಮತ್ತು ನಾಡು ನುಡಿ ಜಲಕ್ಕಾಗಿ ಶ್ರಮಿಸುತ್ತಾ ಬಂದಿದೆ. ಈಗ ಮೂರನೇ ವರ್ಷ ಮುಕ್ತಾಯಗೊಂಡು 4ನೇ ವರ್ಷಕ್ಕೆ ಪಾದರ್ಪಣೆ ಯಾಗುತ್ತಿರುವ ಹಿನ್ನೆಲೆಯಲ್ಲಿ ಬರುವ ಫೆಬ್ರವರಿ 8ರಂದು ಶಹಾಪುರ ನಗರದ ಹಳಿಸಗರದಲ್ಲಿ ಉಚಿತ ಸಾಮೂಹಿಕ ವಿವಾಹ ಸಮಾರಂಭ ಹಮ್ಮಿಕೊಂಡಿದ್ದು ಈ ಕಾರ್ಯಕ್ರಮಕ್ಕೆ ನಾಡಿನ ಹರ,ಗುರು ಚರಮೂರ್ತಿಗಳು ಹಾಗೂ ರಾಜಕೀಯ ಗಣ್ಯರು, ವಿವಿಧ ಸಂಘಟನೆಯ ಮುಖಂಡರು ಭಾಗವಹಿಸಲಿದ್ದಾರೆ. ಪ್ರತಿ ವರ್ಷದಂತೆ ಈ ವರ್ಷವು ಶಹಾಪೂರ ನಗರ ಹಳಿಸಗರ ಗ್ರಾಮದಲ್ಲಿ ಕಲ್ಯಾಣ ಕರ್ನಾಟಕ ಕಾರ್ಮಿಕ ಹಿತ ರಕ್ಷಣಾ ಸಂಘವು ಬಡವರ ಮಕ್ಕಳ ಹಿತಕ್ಕಾಗಿ ಈ ಸಂಘಟನೆಯ ಉಚಿತ ವಿವಾಹ ಕಾರ್ಯಕ್ರಮ ಹಮ್ಮಿಕೊಂಡಿದೆ ಹಾಗಾಗಿ ಸಗರ ನಾಡಿನ ಜನತೆಯು ಈ ಕಾರ್ಯಕ್ರಮದಲ್ಲಿ ತಮ್ಮ ಮಕ್ಕಳಿಗೆ ಮದುವೆ ಮಾಡುಲು ಇಚ್ಚಿಸುವವರು ಸಂಘಟನೆಯ ಸಂಸ್ಥಾಪಕ ಅಧ್ಯಕ್ಷರಾದ ಮೌನೇಶ ಹಳಿಸಗರ ಅವರನ್ನು ಸಂಪರ್ಕಿಸಬಹುದಾಗಿದೆ ತಿಳಿಸಿದ್ದಾರೆ. ಮೌನೇಶ ಹಳಿಸಗರ ಸಂಪರ್ಕಿಸುವ ಕರೆ ಸಂಖ್ಯೆ. 9731520852 -9741142898 *

ಸುದ್ದಿ ಮತ್ತು ಜಾಹಿರಾತುಗಳಿಗಾಗಿ ಸಂಪರ್ಕಿಸಿ : +91 99809 19019
error: Content is protected !!