ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ; ಹತ್ತು ದಿನಗಳವರೆಗೆ ಅವಧಿ ವಿಸ್ತರಣೆ

ಬೆಂಗಳೂರು : ಇಂದು ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಅವರೊಂದಿಗೆ ವಿಧಾನಸೌಧದಲ್ಲಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಕೈಗೊಂಡಿರುವ ಮಹತ್ವದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಕುರಿತು ಅಧಿಕಾರಿಗಳ ಜೊತೆ ವಿಸ್ತೃತವಾಗಿ ಚರ್ಚಿಸಿ, ನಂತರ ಮಾಧ್ಯಮದವರೊಂದಿಗೆ ಮಾತನಾಡಿದೆ.

ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಮನವಿ ಮೇರೆಗೆ, ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ, ಮಹತ್ವದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಪೂರ್ಣಗೊಳಿಸಲು ಅದರ ಅವಧಿಯನ್ನು ಇನ್ನೂ ಹತ್ತು ದಿನಗಳವರೆಗೆ ವಿಸ್ತರಿಸಲಾಗಿದ್ದು, ಅಕ್ಟೋಬರ್ 18ರವರೆಗೆ ಎಲ್ಲ ಸರ್ಕಾರಿ ಮತ್ತು ಸರ್ಕಾರಿ ಅನುದಾನಿತ ಶಾಲೆಗಳಿಗೆ ಮಾತ್ರ ರಜೆ ಘೋಷಿಸಲಾಗಿದೆ.

ರಾಜ್ಯದ ಗ್ರಾಮೀಣ ಪ್ರದೇಶದಲ್ಲಿ ಶೇ. 90ರಷ್ಟು ಜನ ಸಮೀಕ್ಷೆಗೆ ಸಹಕಾರ ನೀಡುತ್ತಿದ್ದಾರೆ ಮತ್ತು ಗಣತಿದಾರರು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇಡೀ ಸರ್ಕಾರದ ಪರವಾಗಿ ಅವರೆಲ್ಲರಿಗೂ ಹಾಗೂ ಮಾಹಿತಿ ನೀಡಿದ ನಾಗರಿಕರಿಗೂ ಅಭಿನಂದನೆ ಸಲ್ಲಿಸುತ್ತೇನೆ.

ಬೆಂಗಳೂರು ನಗರಕ್ಕೆ ಸಂಬಂಧಿಸಿದಂತೆ, ಚುನಾವಣಾ ಆಯೋಗದ ಕೆಲವೊಂದು ಕೆಲಸಗಳಿಂದಾಗಿ ಸಮೀಕ್ಷೆ ನಿಧಾನವಾಗಿ ಪ್ರಾರಂಭವಾಗಿದೆ. ನಮ್ಮ ಸರ್ಕಾರದ ಪರವಾಗಿ ಮನವಿ ಮಾಡುವುದೇನೆಂದರೆ, ರಾಜ್ಯದ ಹಿತಕ್ಕಾಗಿ ಮತ್ತು ಎಲ್ಲರಿಗೂ ನ್ಯಾಯ ಒದಗಿಸಲು ಈ ಸಮೀಕ್ಷೆ ಅತ್ಯಗತ್ಯ. ಗ್ರಾಮೀಣ ಪ್ರದೇಶದಿಂದ ಬೆಂಗಳೂರಿಗೆ ಬಂದು ನೆಲಸಿರುವವರ ಆರ್ಥಿಕ ಮತ್ತು ಶೈಕ್ಷಣಿಕ ಸುಧಾರಣೆಯನ್ನು ತಿಳಿಯಲು ಇದು ಮುಖ್ಯ. ಆದ್ದರಿಂದ, ಬೆಂಗಳೂರಿನ ನಿವಾಸಿಗಳು ಗಣತಿದಾರರಿಗೆ ಸಹಕಾರ ನೀಡಬೇಕು ಅಥವಾ ಆನ್‌ಲೈನ್‌ನಲ್ಲಿ ಸಹ ಮಾಹಿತಿ ನೀಡಬಹುದು. ಎಲ್ಲಾ ಮಾಹಿತಿ ನೀಡಲೇಬೇಕೆಂಬ ಒತ್ತಡ ಇಲ್ಲ, ನಿಮಗೆ ಎಷ್ಟು ಮಾಹಿತಿ ನೀಡಬೇಕೆಂದು ಅನಿಸುತ್ತದೆಯೋ ಅಷ್ಟನ್ನೇ ನೀಡಿ ಸಹಕರಿಸಬೇಕೆಂದು ವಿನಂತಿ.

Leave a Reply

Your email address will not be published. Required fields are marked *

You missed

*ಬಡ ಕಾರ್ಮಿಕ ಮಕ್ಕಳ ಹಿತಕ್ಕಾಗಿ ಉಚಿತ ವಿವಾಹ ನೋಂದಣಿ -ಮೌನೇಶ ಹಳಿಸಗರ* ಕಲ್ಯಾಣ ಕರ್ನಾಟಕ ಕಾರ್ಮಿಕ ಹಿತ ರಕ್ಷಣಾ ಸಂಘಟನೆಯಿಂದ ಕಲ್ಯಾಣ ಕರ್ನಾಟಕ ಭಾಗದಲ್ಲಿ ಸತತವಾಗಿ ಕಳೆದ 3 ವರ್ಷಗಳಿಂದ ಕಾರ್ಮಿಕರ ಹಿತಕ್ಕಾಗಿ ಕಾರ್ಮಿಕರ ಹೇಳ್ಗೆಗಾಗಿ ಮತ್ತು ನಾಡು ನುಡಿ ಜಲಕ್ಕಾಗಿ ಶ್ರಮಿಸುತ್ತಾ ಬಂದಿದೆ. ಈಗ ಮೂರನೇ ವರ್ಷ ಮುಕ್ತಾಯಗೊಂಡು 4ನೇ ವರ್ಷಕ್ಕೆ ಪಾದರ್ಪಣೆ ಯಾಗುತ್ತಿರುವ ಹಿನ್ನೆಲೆಯಲ್ಲಿ ಬರುವ ಫೆಬ್ರವರಿ 8ರಂದು ಶಹಾಪುರ ನಗರದ ಹಳಿಸಗರದಲ್ಲಿ ಉಚಿತ ಸಾಮೂಹಿಕ ವಿವಾಹ ಸಮಾರಂಭ ಹಮ್ಮಿಕೊಂಡಿದ್ದು ಈ ಕಾರ್ಯಕ್ರಮಕ್ಕೆ ನಾಡಿನ ಹರ,ಗುರು ಚರಮೂರ್ತಿಗಳು ಹಾಗೂ ರಾಜಕೀಯ ಗಣ್ಯರು, ವಿವಿಧ ಸಂಘಟನೆಯ ಮುಖಂಡರು ಭಾಗವಹಿಸಲಿದ್ದಾರೆ. ಪ್ರತಿ ವರ್ಷದಂತೆ ಈ ವರ್ಷವು ಶಹಾಪೂರ ನಗರ ಹಳಿಸಗರ ಗ್ರಾಮದಲ್ಲಿ ಕಲ್ಯಾಣ ಕರ್ನಾಟಕ ಕಾರ್ಮಿಕ ಹಿತ ರಕ್ಷಣಾ ಸಂಘವು ಬಡವರ ಮಕ್ಕಳ ಹಿತಕ್ಕಾಗಿ ಈ ಸಂಘಟನೆಯ ಉಚಿತ ವಿವಾಹ ಕಾರ್ಯಕ್ರಮ ಹಮ್ಮಿಕೊಂಡಿದೆ ಹಾಗಾಗಿ ಸಗರ ನಾಡಿನ ಜನತೆಯು ಈ ಕಾರ್ಯಕ್ರಮದಲ್ಲಿ ತಮ್ಮ ಮಕ್ಕಳಿಗೆ ಮದುವೆ ಮಾಡುಲು ಇಚ್ಚಿಸುವವರು ಸಂಘಟನೆಯ ಸಂಸ್ಥಾಪಕ ಅಧ್ಯಕ್ಷರಾದ ಮೌನೇಶ ಹಳಿಸಗರ ಅವರನ್ನು ಸಂಪರ್ಕಿಸಬಹುದಾಗಿದೆ ತಿಳಿಸಿದ್ದಾರೆ. ಮೌನೇಶ ಹಳಿಸಗರ ಸಂಪರ್ಕಿಸುವ ಕರೆ ಸಂಖ್ಯೆ. 9731520852 -9741142898 *

ಸುದ್ದಿ ಮತ್ತು ಜಾಹಿರಾತುಗಳಿಗಾಗಿ ಸಂಪರ್ಕಿಸಿ : +91 99809 19019
error: Content is protected !!