ತಾಲ್ಲೂಕು ಮಟ್ಟದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನ

ಬೆಂಗಳೂರು, : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ಮಾಧ್ಯಮ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ತಾಲ್ಲೂಕು ಮಟ್ಟದ ಪತ್ರಕರ್ತರು ತಮ್ಮ ವೃತ್ತಿ ನಿರತ ಚಟುವಟಿಕೆಗಳ ಸಂಬಂಧ ತಮ್ಮ ಜಿಲ್ಲಾದ್ಯಂತ ಉಚಿತವಾಗಿ ಸಂಚರಿಸಲು ಅನುಕೂಲವಾಗುವಂತೆ ಉಚಿತ ಬಸ್ ಪಾಸ್ ನೀಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಪತ್ರಕರ್ತರು ತಾವು ಕಾರ್ಯನಿರ್ವಹಿಸುತ್ತಿರುವ ಮಾಧ್ಯಮ ಸಂಸ್ಥೆಗಳಿಂದ ಸೇವಾ ಪ್ರಮಾಣಪತ್ರ, ಶಿಫಾರಸ್ಸು ಪತ್ರ ಮತ್ತು 11 ತಿಂಗಳುಗಳ ವೇತನಪತ್ರ (ಲೈನೇಜ್/ಸಂಭಾವನೆ/ಕಮೀಷನ್ ಪಡೆದಿರುವ ದಾಖಲೆ)ಗಳನ್ನು ಅಥವಾ ವೇತನ ಜಮಾ ಆಗಿರುವ ಮಾಹಿತಿ ಇರುವಂತಹ ಬ್ಯಾಂಕ್ ಸ್ಟೇಟ್ ಮೆಂಟ್ ಲಗತ್ತಿಸಿ “ಸೇವಾಸಿಂಧು” ಪೋರ್ಟಲ್ https://sevasindhu.karnataka.gov.in ಮೂಲಕ ಆನ್‍ಲೈನ್‍ನಲ್ಲಿ ಅರ್ಜಿಗಳನ್ನು ಸಲ್ಲಿಸಬಹುದು.

ಆನ್‍ಲೈನ್‍ನಲ್ಲಿ ಸಲ್ಲಿಸಲಾದ ಅರ್ಜಿ ಮತ್ತು ಲಗತ್ತಿಸಲಾಗಿರುವ ದಾಖಲೆಗಳ ಒಂದು ಪ್ರತಿಯನ್ನು ಆಯಾ ಜಿಲ್ಲೆಯ ವಾರ್ತಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕು.

ಸ್ವೀಕೃತ ಅರ್ಜಿಗಳನ್ನು ಆಯ್ಕೆ ಸಮಿತಿಯ ಸಭೆಯಲ್ಲಿ ಪರಿಶೀಲಿಸಿ ಬಸ್ ಪಾಸ್ ಮಂಜೂರು ಮಾಡಲಾಗುತ್ತದೆ.

ರಾಜ್ಯದ ಎಲ್ಲ ತಾಲ್ಲೂಕುಗಳ ಅರ್ಹ ಪತ್ರಕರ್ತರು ಕೂಡಲೇ “ಸೇವಾಸಿಂಧು” ಪೋರ್ಟಲ್ ಮೂಲಕ ಅರ್ಜಿಗಳನ್ನು ಸಲ್ಲಿಸುವುದರ ಮೂಲಕ ಈ ಸದುಪಯೋಗ ಪಡೆದುಕೊಳ್ಳಬಹುದು ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾದ ಹೇಮಂತ್ ನಿಂಬಾಳ್ಕರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You missed

*ಬಡ ಕಾರ್ಮಿಕ ಮಕ್ಕಳ ಹಿತಕ್ಕಾಗಿ ಉಚಿತ ವಿವಾಹ ನೋಂದಣಿ -ಮೌನೇಶ ಹಳಿಸಗರ* ಕಲ್ಯಾಣ ಕರ್ನಾಟಕ ಕಾರ್ಮಿಕ ಹಿತ ರಕ್ಷಣಾ ಸಂಘಟನೆಯಿಂದ ಕಲ್ಯಾಣ ಕರ್ನಾಟಕ ಭಾಗದಲ್ಲಿ ಸತತವಾಗಿ ಕಳೆದ 3 ವರ್ಷಗಳಿಂದ ಕಾರ್ಮಿಕರ ಹಿತಕ್ಕಾಗಿ ಕಾರ್ಮಿಕರ ಹೇಳ್ಗೆಗಾಗಿ ಮತ್ತು ನಾಡು ನುಡಿ ಜಲಕ್ಕಾಗಿ ಶ್ರಮಿಸುತ್ತಾ ಬಂದಿದೆ. ಈಗ ಮೂರನೇ ವರ್ಷ ಮುಕ್ತಾಯಗೊಂಡು 4ನೇ ವರ್ಷಕ್ಕೆ ಪಾದರ್ಪಣೆ ಯಾಗುತ್ತಿರುವ ಹಿನ್ನೆಲೆಯಲ್ಲಿ ಬರುವ ಫೆಬ್ರವರಿ 8ರಂದು ಶಹಾಪುರ ನಗರದ ಹಳಿಸಗರದಲ್ಲಿ ಉಚಿತ ಸಾಮೂಹಿಕ ವಿವಾಹ ಸಮಾರಂಭ ಹಮ್ಮಿಕೊಂಡಿದ್ದು ಈ ಕಾರ್ಯಕ್ರಮಕ್ಕೆ ನಾಡಿನ ಹರ,ಗುರು ಚರಮೂರ್ತಿಗಳು ಹಾಗೂ ರಾಜಕೀಯ ಗಣ್ಯರು, ವಿವಿಧ ಸಂಘಟನೆಯ ಮುಖಂಡರು ಭಾಗವಹಿಸಲಿದ್ದಾರೆ. ಪ್ರತಿ ವರ್ಷದಂತೆ ಈ ವರ್ಷವು ಶಹಾಪೂರ ನಗರ ಹಳಿಸಗರ ಗ್ರಾಮದಲ್ಲಿ ಕಲ್ಯಾಣ ಕರ್ನಾಟಕ ಕಾರ್ಮಿಕ ಹಿತ ರಕ್ಷಣಾ ಸಂಘವು ಬಡವರ ಮಕ್ಕಳ ಹಿತಕ್ಕಾಗಿ ಈ ಸಂಘಟನೆಯ ಉಚಿತ ವಿವಾಹ ಕಾರ್ಯಕ್ರಮ ಹಮ್ಮಿಕೊಂಡಿದೆ ಹಾಗಾಗಿ ಸಗರ ನಾಡಿನ ಜನತೆಯು ಈ ಕಾರ್ಯಕ್ರಮದಲ್ಲಿ ತಮ್ಮ ಮಕ್ಕಳಿಗೆ ಮದುವೆ ಮಾಡುಲು ಇಚ್ಚಿಸುವವರು ಸಂಘಟನೆಯ ಸಂಸ್ಥಾಪಕ ಅಧ್ಯಕ್ಷರಾದ ಮೌನೇಶ ಹಳಿಸಗರ ಅವರನ್ನು ಸಂಪರ್ಕಿಸಬಹುದಾಗಿದೆ ತಿಳಿಸಿದ್ದಾರೆ. ಮೌನೇಶ ಹಳಿಸಗರ ಸಂಪರ್ಕಿಸುವ ಕರೆ ಸಂಖ್ಯೆ. 9731520852 -9741142898 *

ಸುದ್ದಿ ಮತ್ತು ಜಾಹಿರಾತುಗಳಿಗಾಗಿ ಸಂಪರ್ಕಿಸಿ : +91 99809 19019
error: Content is protected !!